April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಮುಗೇರಡ್ಕ: ಮೂವರು ದೈವಗಳ ದೈವಸ್ಥಾನ ಮುಗೇರಡ್ಕದ ವಾರ್ಷಿಕ ನೇಮೋತ್ಸವ ಮಕರ ಸಂಕ್ರಮಣದಂದು ಗೊನೆ ಮಹೂರ್ತವಾಗಿ ಜ. 18ಕ್ಕೆ ಕೋಳಿಗೂಟ, ಜ.22 ನೇ ರಾತ್ರಿ ಅಂತರ ಮತ್ತು ದೇವಸ್ಯ ಬಂಡಾರ ಮನೆಯಿಂದ ಮುಗೇರಡ್ಕ ಕ್ಷೇತ್ರಕ್ಕೆ ದೈವದ ಭಂಡಾರ ಆಗಮಿಸಿದ ನಂತರ ಶಿರಾಡಿ ದೈವಕ್ಕೆ ಹೊಸದಾಗಿ ನಿರ್ಮಾಣ ಮಾಡಿದ ಹುಲಿ ಬಂಡಿ ಒಪ್ಪಿಸುವ ಕಾರ್ಯಕ್ರಮ ಮದ್ಯ ರಾತ್ರಿ ಜರುಗಿತು.

ನಂತರ ದೈವಂಕುಲು, ಬಿರ್ಮೆರ್, ಕುಮಾರ, ಗಿಳಿರಾಮ, ಬಸ್ತಿನಾಯ್ಕ ಇನ್ನಿತರ ಪರಿವಾರ ದೈವಗಳ ನೇಮ ಕಾರ್ಯ ನಡೆಯಿತು. ಜ.23ರಂದು ಕಲ್ಕುಡ ದೈವ ಪಿಲಿಚಾಮುಂಡಿ ದೈವ ಹಾಗೂ ಶಿರಾಡಿ ದೈವದ ಗಗ್ಗರ ಸೇವೆ ಆರಂಭವಾಗಿ ದಿನವಿಡೀ ದೈವದ ಸೇವೆಗಳು ನಡೆಯಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಮನದ ಕೋರಿಕೆಗಳನ್ನು ಪ್ರಾರ್ಥನೆ ಮಾಡಿ ಹರಕೆ ಒಪ್ಪಿಸಿ ದೈವದ ಗಂಧ ಪ್ರಸಾದ ಸ್ವೀಕಾರ ಮಾಡಿದರು. ಕ್ಷೇತ್ರದಲ್ಲಿ ನಡೆಯುವ ಮಹಾ ಅನ್ನ ಸಂತರ್ಪಣೆ ಕಾರ್ಯದಲ್ಲಿ 15000 ಕ್ಕೂ ಮಿಕ್ಕಿ ಭಕ್ತರು ಅನ್ನ ಪ್ರಸಾದ ಸ್ವೀಕಾರ ಮಾಡಿ ದೈವದ ಕೃಪೆಗೆ ಪಾತ್ರರದರು.

ಈ ನೇಮೋತ್ಸವಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೋಟ್ಯಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಬೆಳ್ತಂಗಡಿ, ಮಾಜಿ ಶಾಸಕರು ಆದ ಸಂಜೀವ ಗೌಡ ಪುತ್ತೂರು, ಕಿರಣ್ ಚಂದ್ರ ಪುಷ್ಪಗಿರಿ, ಹಾಗೂ ಅನೇಕ ದೈವಸ್ಥಾನ ಮತ್ತು ದೇವಸ್ಥಾನ ದ ಆಡಳಿತದಾರರು ಭಾಗವಹಿಸಿದರು.

Related posts

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ನ.16-17: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್ ನಿಂದ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya
error: Content is protected !!