25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಮುಗೇರಡ್ಕ: ಮೂವರು ದೈವಗಳ ದೈವಸ್ಥಾನ ಮುಗೇರಡ್ಕದ ವಾರ್ಷಿಕ ನೇಮೋತ್ಸವ ಮಕರ ಸಂಕ್ರಮಣದಂದು ಗೊನೆ ಮಹೂರ್ತವಾಗಿ ಜ. 18ಕ್ಕೆ ಕೋಳಿಗೂಟ, ಜ.22 ನೇ ರಾತ್ರಿ ಅಂತರ ಮತ್ತು ದೇವಸ್ಯ ಬಂಡಾರ ಮನೆಯಿಂದ ಮುಗೇರಡ್ಕ ಕ್ಷೇತ್ರಕ್ಕೆ ದೈವದ ಭಂಡಾರ ಆಗಮಿಸಿದ ನಂತರ ಶಿರಾಡಿ ದೈವಕ್ಕೆ ಹೊಸದಾಗಿ ನಿರ್ಮಾಣ ಮಾಡಿದ ಹುಲಿ ಬಂಡಿ ಒಪ್ಪಿಸುವ ಕಾರ್ಯಕ್ರಮ ಮದ್ಯ ರಾತ್ರಿ ಜರುಗಿತು.

ನಂತರ ದೈವಂಕುಲು, ಬಿರ್ಮೆರ್, ಕುಮಾರ, ಗಿಳಿರಾಮ, ಬಸ್ತಿನಾಯ್ಕ ಇನ್ನಿತರ ಪರಿವಾರ ದೈವಗಳ ನೇಮ ಕಾರ್ಯ ನಡೆಯಿತು. ಜ.23ರಂದು ಕಲ್ಕುಡ ದೈವ ಪಿಲಿಚಾಮುಂಡಿ ದೈವ ಹಾಗೂ ಶಿರಾಡಿ ದೈವದ ಗಗ್ಗರ ಸೇವೆ ಆರಂಭವಾಗಿ ದಿನವಿಡೀ ದೈವದ ಸೇವೆಗಳು ನಡೆಯಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಮನದ ಕೋರಿಕೆಗಳನ್ನು ಪ್ರಾರ್ಥನೆ ಮಾಡಿ ಹರಕೆ ಒಪ್ಪಿಸಿ ದೈವದ ಗಂಧ ಪ್ರಸಾದ ಸ್ವೀಕಾರ ಮಾಡಿದರು. ಕ್ಷೇತ್ರದಲ್ಲಿ ನಡೆಯುವ ಮಹಾ ಅನ್ನ ಸಂತರ್ಪಣೆ ಕಾರ್ಯದಲ್ಲಿ 15000 ಕ್ಕೂ ಮಿಕ್ಕಿ ಭಕ್ತರು ಅನ್ನ ಪ್ರಸಾದ ಸ್ವೀಕಾರ ಮಾಡಿ ದೈವದ ಕೃಪೆಗೆ ಪಾತ್ರರದರು.

ಈ ನೇಮೋತ್ಸವಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೋಟ್ಯಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಬೆಳ್ತಂಗಡಿ, ಮಾಜಿ ಶಾಸಕರು ಆದ ಸಂಜೀವ ಗೌಡ ಪುತ್ತೂರು, ಕಿರಣ್ ಚಂದ್ರ ಪುಷ್ಪಗಿರಿ, ಹಾಗೂ ಅನೇಕ ದೈವಸ್ಥಾನ ಮತ್ತು ದೇವಸ್ಥಾನ ದ ಆಡಳಿತದಾರರು ಭಾಗವಹಿಸಿದರು.

Related posts

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
error: Content is protected !!