September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಸೌತಡ್ಕ ದೇವಾಲಯಗಳಲ್ಲಿ ಇತ್ತೀಚೆಗೆ ರಚಿಸಿರುವ “ಸೌತಡ್ಕ ಸಂರಕ್ಷಣಾ ವೇದಿಕೆ” ಯ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ ಎಂಬವರು ಈ ಹಿಂದೆ ಮಾಡಿರುವ ಹಿಂದೂ ಧಾರ್ಮಿಕ ಇಲಾಖೆಯ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ತಿಳಿಸಿದರು.

ಅವರು ಜ.25 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇತ್ತೀಚೆಗೆ ರಚಿಸಲಾಗಿರುವ ಸೌತಡ್ಕ ಸಂರಕ್ಷಣಾ ವೇದಿಕೆ” ಎಂಬ ಹೆಸರಿನಲ್ಲಿ ಸೌತಡ್ಕ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಇತರ 4 ಮಂದಿ ಸದಸ್ಯರು ನೂತನ ವ್ಯವಸ್ಥಾಪನಾ ಸಮಿತಿಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವ ಬಗ್ಗೆ ಪತ್ರಿಕೆಯಲ್ಲಿ ವರದಿಯಾದ ಮಾಹಿತಿಯನ್ನು ಪಡಕೊಂಡಿದ್ದು ಇವರುಗಳನ್ನು ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಮರು ಆಯ್ಕೆ ಮಾಡದಂತೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಧ್ಯಕ್ಷರಾದ ಮಾನ್ಯ ದತ್ತಿ ಇಲಾಖಾ ಸಚಿವರಿಗೆ ಮತ್ತು ಆಯುಕ್ತರೊಂದಿಗೆ 8 ಮಂದಿ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರುಗಳಿಗೆ ಲಿಖಿತ ದೂರುಗಳನ್ನು ನೀಡಿರುತ್ತೇವೆ.

ಸೌತಡ್ಕ ದೇವಾಲಯದಲ್ಲಿ ಕಾನೂನು ಬಾಹಿರವಾಗಿ ಮತ್ತು ದತ್ತಿ ಇಲಾಖೆಯ ನಿಯಮಗಳನ್ನು ಉಲ್ಲಂಘನೆ ಮಾಡಿ ನಡೆಸಿರುವ ಭಕ್ತಾದಿಗಳು ದೇವರಿಗೆ ಸಮರ್ಪಿಸಿರುವ ಹರಕೆ ಗಂಟೆಗಳ ಹರಾಜಿನ ಅವ್ಯವಹಾರ ಮತ್ತು ಸುಧೀರ್ಘ 19 ವರ್ಷ ದೇವಳದ ಸಮಿತಿಯಲ್ಲಿ ಸದಸ್ಯರಾಗಿದ್ದು ದೇವಳದ ಪ್ರತಿ ಹುಂಡಿ ಎಣಿಕೆ ಮಾಡುವ ಸಮಯದಲ್ಲಿ ಸ್ವಲ್ಪ ಸ್ವಲ್ಪ ಹಣ ತೆಗೆದಿರಿಸಿ ಆಸ್ತಿ ಖರೀದಿಯ ಸಾಲವನ್ನು ಮರು ಪಾವತಿ ಮಾಡಿರುವ ವಿಶ್ವನಾಥ ಪೂಜಾರಿ ಇವರ ಪತ್ರಿಕಾ ಹೇಳಿಕೆಯ ಅವ್ಯವಹಾರದ ಮರು ತನಿಖೆಯನ್ನು ನಡೆಸುವಂತೆ ಈ ಹಿಂದೆ ಮನವಿಯನ್ನು ಸಲ್ಲಿಸಿರುತ್ತೇವೆ.

2017 ರಿಂದ 2020 ನೇ ಸಾಲಿನ ವ್ಯವಸ್ಥಾಪನಾ ಸಮಿತಿಯು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೇಗುಲದ ಶ್ರೀ ಗಣೇಶ ಕಲಾ ಮಂದಿರದ ಬಲ ಭಾಗದಲ್ಲಿದ್ದ ಹಣ್ಣು ಕಾಯಿಯೊಂದಿಗೆ ಗಂಟೆ ಅಂಗಡಿ, ಮತ್ತು ಕ್ಷೇತ್ರದ ಪ್ರಸಿದ್ದ ಪ್ರಸಾದವಾದ ಅವಲಕ್ಕಿ ಪಂಚಕಜ್ಜಾಯ ತಯಾರಿ ಟೆಂಡರ್ ವ್ಯವಸ್ಥೆಯಲ್ಲಿ ಮತ್ತು ಸಿ. ಸಿ. ಕ್ಯಾಮರಾ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ಅವ್ಯವಹಾರ ನಡೆಸಿ, ದೇಗುಲದ ವ್ಯವಸ್ಥೆಗೆ ನಷ್ಟ ಉಂಟುಮಾಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಠಲ ಕುರ್ಲೆ ಹಾಗೂ ಪುರಂದರ ಕಡೀರ ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಭಾಜಪ ವಿಧಾನ ಸಭಾ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya
error: Content is protected !!