24.4 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನವನ್ನು ಪಡೆದು ಜಯ ಸಾಧಿಸಿದರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಅಶೋಕ್ ಕುಮಾರ್, ದಾಮೋದರ ಗೌಡ, ಕೇಶವ ಪೂಜಾರಿ, ರವೀಂದ್ರನಾಥ್ ಪಿ, ಪುರುಷೋತ್ತಮ, ಕುಸುಮಾವತಿ, ಶೋಭಾ ವಿಜಯಿಯಾದರು.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಉಜ್ವಲ್ ಕುಮಾರ್, ನವೀನ್ ಕುಮಾರ್, ಪರಮೇಶ್ವರ ಗೌಡ, ಯತೀಶ್ ದಡ್ಡು, ಸಂಜೀವ ಮಲೆಕುಡಿಯ ವಿಜಯಿಯಾದರು.

ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ ಚುನಾವಣಾ ಪ್ರಕ್ರಿಯೆ ನಡೆಸಿದರು. ಕೊಯ್ಯೂರು ಸಿಎ ಬ್ಯಾಂಕಿನ ಸಿಇಓ ಅನಂತಕೃಷ್ಣ ರವರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಫಲಿತಾಂಶ ಘೋಷಣೆಗೆ ಕೋರ್ಟ್ ತಡೆಯಿರುವುದರಿಂದ ಕೋರ್ಟು ತೀರ್ಪಿನ ಬಳಿಕ ಘೋಷಣೆಯಾಗಲಿದೆ.

Related posts

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya
error: Content is protected !!