April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

ಬೆಳ್ತಂಗಡಿ: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನವನ್ನು ಪಡೆದು ಜಯ ಸಾಧಿಸಿದರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಅಶೋಕ್ ಕುಮಾರ್, ದಾಮೋದರ ಗೌಡ, ಕೇಶವ ಪೂಜಾರಿ, ರವೀಂದ್ರನಾಥ್ ಪಿ, ಪುರುಷೋತ್ತಮ, ಕುಸುಮಾವತಿ, ಶೋಭಾ ವಿಜಯಿಯಾದರು.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಉಜ್ವಲ್ ಕುಮಾರ್, ನವೀನ್ ಕುಮಾರ್, ಪರಮೇಶ್ವರ ಗೌಡ, ಯತೀಶ್ ದಡ್ಡು, ಸಂಜೀವ ಮಲೆಕುಡಿಯ ವಿಜಯಿಯಾದರು.

ಚುನಾವಣಾಧಿಕಾರಿಯಾಗಿ ಪ್ರತಿಮಾ ಬಿ ಚುನಾವಣಾ ಪ್ರಕ್ರಿಯೆ ನಡೆಸಿದರು. ಕೊಯ್ಯೂರು ಸಿಎ ಬ್ಯಾಂಕಿನ ಸಿಇಓ ಅನಂತಕೃಷ್ಣ ರವರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಫಲಿತಾಂಶ ಘೋಷಣೆಗೆ ಕೋರ್ಟ್ ತಡೆಯಿರುವುದರಿಂದ ಕೋರ್ಟು ತೀರ್ಪಿನ ಬಳಿಕ ಘೋಷಣೆಯಾಗಲಿದೆ.

Related posts

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya
error: Content is protected !!