25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

ಬಂಗಾಡಿ: ಇಂದುಬೆಟ್ಟು ಗ್ರಾಮದ ಶ್ರೀ ಬಂಗಾಡಿ ಹಾಡಿ ದೈವ ದೈವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ ಬೆದ್ರಬೆಟ್ಟು ಇವರು ನೇಮಕಗೊಂಡಿದ್ದಾರೆ.


ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯು ಬಂಗಾಡಿ ಶ್ರೀ ಹಾಡಿದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ನೇಮಕಗೊಳಿಸಿ ಆದೇಶ ನೀಡಿದ್ದು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮುಕುಂದ ಸುವರ್ಣ ಅವರು ನೇಮಕಗೊಂಡಿದ್ದಾರೆ.

ಇವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಪಂಚಾಯತದ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಸಮಿತಿಯ ಸದಸ್ಯರಾಗಿ ರವಿ ನೇತ್ರಾವತಿ ನಗರ ಇಂದಬೆಟ್ಟು, ಶ್ರೀಮತಿ ರೋಹಿಣಿ ಧರ್ಣಪ್ಪ ಪೂಜಾರಿ, ಕೊಪ್ಪದ ಕೋಡಿ ಇಂದಬೆಟ್ಟು, ಶ್ರೀಮತಿ ಚಂದ್ರಾವತಿ ಕುಶಾಲಪ್ಪ, ಕಾರಿಂಜ ಮನೆ ನಾವೂರು, ಸುರೇಶ್ ಪರಾರಿ ಮನೆ ನಾವೂರು, ಗಣೇಶ್ ಪ್ರಸಾದ್.ಡಿ ತಾರಕೂಟೇಲು ಇಂದಬೆಟ್ಟು, ದೇಜಪ್ಪ ಗೌಡ ಕುಂಡಡ್ಕ ಮನೆ ನಾವೂರು. ಎಚ್. ರಾಮಕೃಷ್ಣ ಗೌಡ ಹಣಿಬೆಟ್ಟು ಮನೆ ಇಂದಬೆಟ್ಟು ಹಾಗೂ ಪ್ರಧಾನ ಅರ್ಚಕರು ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

Related posts

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya
error: Content is protected !!