23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ : ಮಚ್ಚಿನ ಗ್ರಾಮ ವ್ಯಾಪ್ತಿಯ ಬಂಗೇರಕಟ್ಟೆ- ಅಮ್ಡಾಲ್ ನೆತ್ತರವರೆಗಿನ ರಸ್ತೆ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಚ್ಚಿನ ಗ್ರಾಮ ಸಮಿತಿ ಅಧ್ಯಕ್ಷ ಹನೀಫ್ ಬಳ್ಳಮಂಜ ನೇತೃತ್ವದಲ್ಲಿ ಜ.24 ರಂದು ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರತಿಭಟನಾಕರರನ್ನು ಉದ್ದೇಶಿಸಿ ಕ್ಷೇತ್ರ ಸಮಿತಿ ಸದಸ್ಯರಾದ ಅಬ್ದುಲ್ ರೌಫ್, ಸ್ಥಳೀಯರು ರಸ್ತೆ ದುರಸ್ಥಿಗೆ ಆಗ್ರಹಿಸಿ ಪಂಚಾಯತ್ ಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನಗಳು ಆಗಿಲ್ಲ, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಎಚ್ಚರಗೊಂಡು ಒಂದು ತಿಂಗಳೊಳಗೆ ರಸ್ತೆಗೆ ಡಾಂಬರು ಹಾಕಬೇಕು, ಒಂದು ತಿಂಗಳೊಳಗೆ ಕೆಲಸ ಆರಂಭವಾಗದಿದ್ದರೆ ಗ್ರಾಮದ ಎಲ್ಲಾ ನಾಗರೀಕನ್ನು ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರನ್ನು ಸೇರಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಚ್ಚರಿಕೆ ನೀಡಿದರು.

ಬಂಗೇರಕಟ್ಟೆಯಿಂದ ಅಂಡಾಲ್- ನೆತ್ತರವರೆಗಿನ ರಸ್ತೆಯು ಹಲವಾರು ವರ್ಷಗಳಿಂದ ಸಂಪೂರ್ಣವಾಗಿ ಹದಗೆಟ್ಟು ಜನರು ಓಡಾಡಲು ಯೋಗ್ಯವಲ್ಲದ ಸ್ಥಿತಿಗೆ ತಲುಪಿದ್ದು, ಅದನ್ನು ಆದಷ್ಟು ಬೇಗ ದುರಸ್ಥಿಗೊಳಿಸಬೇಕೆಂದು ಕಣಿಯೂರು ಬ್ಲಾಕ್ ಕಾರ್ಯದರ್ಶಿಗಳಾದ ಹನೀಫ್ ಟಿ. ಎಸ್ ಆಗ್ರಹಿಸಿದರು.

ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ರಸ್ತೆ ದುರಸ್ಥಿಗೆ ಆಗ್ರಹಿಸಿ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಮುಸ್ತಾಫ ಬಂಗೇರಕಟ್ಟೆ, ರಝಕ್ ಬಿ.ಎಂ, ಖಾಸಿಂ ಬಳ್ಳಮಂಜ, ಪಾರೆಂಕಿ ಬ್ರಾಂಚ್ ಅಧ್ಯಕ್ಷರಾದ ಶಾಫಿ ಸಾಲುಮರ, ವಝೀರ್ ಸಾಲುಮರ, ದಾವೂದ್ ಬಳ್ಳಮಂಜ, ಬ್ರಾಂಚ್ ಪದಾಧಿಕಾರಿಗಳು, ಕಾರ್ಯಕರ್ತರು, ನಾಗರೀಕರು ಪಾಲ್ಗೊಂಡಿದ್ದರು.

Related posts

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya
error: Content is protected !!