37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಜ.25 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಆರ್ಯಭಟ ಪ್ರಶಸ್ತಿ ಪುರಸ್ಕೃತರಾದ ಉದಯ್ ಕುಮಾರ್ ಲಾಯಿಲ, ಸಮೂಹ ಸಂಪನ್ಮೂಲ ವ್ಯಕ್ತಿ ಗುರುವಾಯನಕೆರೆ ಕ್ಲಸ್ಟರ್ ರಾಜೇಶ್, ಸ್ಪರ್ಧಾ ತೀರ್ಪುಗಾರರಾಗಿ ಗಣೇಶ್ ಆಚಾರ್ಯ ಗುಂಪಲಾಜೆ ಉಪಸ್ಥಿತರಿದ್ದರು.

ತಾಲೂಕಿನ 18 ಸರಕಾರಿ ಶಾಲೆಗಳಲ್ಲಿ 600 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅದರಲ್ಲಿ ಆಯ್ದ 50 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಂತಿಮ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಂತರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

1-5ನೇ ತರಗತಿ ವಿಜೇತರು: ಪ್ರಥಮ – ಗೌತಮಿ ಮೇಲಂತಬೆಟ್ಟು ಶಾಲೆ, ದ್ವಿತೀಯ -ಅನ್ವಿತಾ ಹಳೆಪೇಟೆ ಶಾಲೆ, ತೃತೀಯ- ಮನೀಶ್ ಹುಣ್ಸೆಕಟ್ಟೆ.

6-7ನೇ ತರಗತಿ ವಿಜೇತರು: ಪ್ರಥಮ – ಸಮೀಕ್ಷಾ ಇಂದಬೆಟ್ಟು ಶಾಲೆ, ದ್ವಿತೀಯ – ಸಂನಾಝ್ – ಹಳೆಪೇಟೆ ಶಾಲೆ,
ತೃತೀಯ – ಜಾನ್ವಿ ಮಾದರಿ ಶಾಲೆ ಬೆಳ್ತಂಗಡಿ,

ಬೆಳ್ತಂಗಡಿ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ರೋಹಿತಾಕ್ಷ ನಿರೂಪಿಸಿ ವಂದಿಸಿದರು.

ಈ ಸಂದರ್ಭದಲ್ಲಿ ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!