23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಜ.25 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಆರ್ಯಭಟ ಪ್ರಶಸ್ತಿ ಪುರಸ್ಕೃತರಾದ ಉದಯ್ ಕುಮಾರ್ ಲಾಯಿಲ, ಸಮೂಹ ಸಂಪನ್ಮೂಲ ವ್ಯಕ್ತಿ ಗುರುವಾಯನಕೆರೆ ಕ್ಲಸ್ಟರ್ ರಾಜೇಶ್, ಸ್ಪರ್ಧಾ ತೀರ್ಪುಗಾರರಾಗಿ ಗಣೇಶ್ ಆಚಾರ್ಯ ಗುಂಪಲಾಜೆ ಉಪಸ್ಥಿತರಿದ್ದರು.

ತಾಲೂಕಿನ 18 ಸರಕಾರಿ ಶಾಲೆಗಳಲ್ಲಿ 600 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅದರಲ್ಲಿ ಆಯ್ದ 50 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಂತಿಮ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಂತರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

1-5ನೇ ತರಗತಿ ವಿಜೇತರು: ಪ್ರಥಮ – ಗೌತಮಿ ಮೇಲಂತಬೆಟ್ಟು ಶಾಲೆ, ದ್ವಿತೀಯ -ಅನ್ವಿತಾ ಹಳೆಪೇಟೆ ಶಾಲೆ, ತೃತೀಯ- ಮನೀಶ್ ಹುಣ್ಸೆಕಟ್ಟೆ.

6-7ನೇ ತರಗತಿ ವಿಜೇತರು: ಪ್ರಥಮ – ಸಮೀಕ್ಷಾ ಇಂದಬೆಟ್ಟು ಶಾಲೆ, ದ್ವಿತೀಯ – ಸಂನಾಝ್ – ಹಳೆಪೇಟೆ ಶಾಲೆ,
ತೃತೀಯ – ಜಾನ್ವಿ ಮಾದರಿ ಶಾಲೆ ಬೆಳ್ತಂಗಡಿ,

ಬೆಳ್ತಂಗಡಿ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ರೋಹಿತಾಕ್ಷ ನಿರೂಪಿಸಿ ವಂದಿಸಿದರು.

ಈ ಸಂದರ್ಭದಲ್ಲಿ ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya
error: Content is protected !!