29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಮುಗೇರಡ್ಕ: ಮೂವರು ದೈವಗಳ ದೈವಸ್ಥಾನ ಮುಗೇರಡ್ಕದ ವಾರ್ಷಿಕ ನೇಮೋತ್ಸವ ಮಕರ ಸಂಕ್ರಮಣದಂದು ಗೊನೆ ಮಹೂರ್ತವಾಗಿ ಜ. 18ಕ್ಕೆ ಕೋಳಿಗೂಟ, ಜ.22 ನೇ ರಾತ್ರಿ ಅಂತರ ಮತ್ತು ದೇವಸ್ಯ ಬಂಡಾರ ಮನೆಯಿಂದ ಮುಗೇರಡ್ಕ ಕ್ಷೇತ್ರಕ್ಕೆ ದೈವದ ಭಂಡಾರ ಆಗಮಿಸಿದ ನಂತರ ಶಿರಾಡಿ ದೈವಕ್ಕೆ ಹೊಸದಾಗಿ ನಿರ್ಮಾಣ ಮಾಡಿದ ಹುಲಿ ಬಂಡಿ ಒಪ್ಪಿಸುವ ಕಾರ್ಯಕ್ರಮ ಮದ್ಯ ರಾತ್ರಿ ಜರುಗಿತು.

ನಂತರ ದೈವಂಕುಲು, ಬಿರ್ಮೆರ್, ಕುಮಾರ, ಗಿಳಿರಾಮ, ಬಸ್ತಿನಾಯ್ಕ ಇನ್ನಿತರ ಪರಿವಾರ ದೈವಗಳ ನೇಮ ಕಾರ್ಯ ನಡೆಯಿತು. ಜ.23ರಂದು ಕಲ್ಕುಡ ದೈವ ಪಿಲಿಚಾಮುಂಡಿ ದೈವ ಹಾಗೂ ಶಿರಾಡಿ ದೈವದ ಗಗ್ಗರ ಸೇವೆ ಆರಂಭವಾಗಿ ದಿನವಿಡೀ ದೈವದ ಸೇವೆಗಳು ನಡೆಯಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಮನದ ಕೋರಿಕೆಗಳನ್ನು ಪ್ರಾರ್ಥನೆ ಮಾಡಿ ಹರಕೆ ಒಪ್ಪಿಸಿ ದೈವದ ಗಂಧ ಪ್ರಸಾದ ಸ್ವೀಕಾರ ಮಾಡಿದರು. ಕ್ಷೇತ್ರದಲ್ಲಿ ನಡೆಯುವ ಮಹಾ ಅನ್ನ ಸಂತರ್ಪಣೆ ಕಾರ್ಯದಲ್ಲಿ 15000 ಕ್ಕೂ ಮಿಕ್ಕಿ ಭಕ್ತರು ಅನ್ನ ಪ್ರಸಾದ ಸ್ವೀಕಾರ ಮಾಡಿ ದೈವದ ಕೃಪೆಗೆ ಪಾತ್ರರದರು.

ಈ ನೇಮೋತ್ಸವಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೋಟ್ಯಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಬೆಳ್ತಂಗಡಿ, ಮಾಜಿ ಶಾಸಕರು ಆದ ಸಂಜೀವ ಗೌಡ ಪುತ್ತೂರು, ಕಿರಣ್ ಚಂದ್ರ ಪುಷ್ಪಗಿರಿ, ಹಾಗೂ ಅನೇಕ ದೈವಸ್ಥಾನ ಮತ್ತು ದೇವಸ್ಥಾನ ದ ಆಡಳಿತದಾರರು ಭಾಗವಹಿಸಿದರು.

Related posts

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya
error: Content is protected !!