25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಮುಗೇರಡ್ಕ: ಮೂವರು ದೈವಗಳ ದೈವಸ್ಥಾನ ಮುಗೇರಡ್ಕದ ವಾರ್ಷಿಕ ನೇಮೋತ್ಸವ ಮಕರ ಸಂಕ್ರಮಣದಂದು ಗೊನೆ ಮಹೂರ್ತವಾಗಿ ಜ. 18ಕ್ಕೆ ಕೋಳಿಗೂಟ, ಜ.22 ನೇ ರಾತ್ರಿ ಅಂತರ ಮತ್ತು ದೇವಸ್ಯ ಬಂಡಾರ ಮನೆಯಿಂದ ಮುಗೇರಡ್ಕ ಕ್ಷೇತ್ರಕ್ಕೆ ದೈವದ ಭಂಡಾರ ಆಗಮಿಸಿದ ನಂತರ ಶಿರಾಡಿ ದೈವಕ್ಕೆ ಹೊಸದಾಗಿ ನಿರ್ಮಾಣ ಮಾಡಿದ ಹುಲಿ ಬಂಡಿ ಒಪ್ಪಿಸುವ ಕಾರ್ಯಕ್ರಮ ಮದ್ಯ ರಾತ್ರಿ ಜರುಗಿತು.

ನಂತರ ದೈವಂಕುಲು, ಬಿರ್ಮೆರ್, ಕುಮಾರ, ಗಿಳಿರಾಮ, ಬಸ್ತಿನಾಯ್ಕ ಇನ್ನಿತರ ಪರಿವಾರ ದೈವಗಳ ನೇಮ ಕಾರ್ಯ ನಡೆಯಿತು. ಜ.23ರಂದು ಕಲ್ಕುಡ ದೈವ ಪಿಲಿಚಾಮುಂಡಿ ದೈವ ಹಾಗೂ ಶಿರಾಡಿ ದೈವದ ಗಗ್ಗರ ಸೇವೆ ಆರಂಭವಾಗಿ ದಿನವಿಡೀ ದೈವದ ಸೇವೆಗಳು ನಡೆಯಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಮನದ ಕೋರಿಕೆಗಳನ್ನು ಪ್ರಾರ್ಥನೆ ಮಾಡಿ ಹರಕೆ ಒಪ್ಪಿಸಿ ದೈವದ ಗಂಧ ಪ್ರಸಾದ ಸ್ವೀಕಾರ ಮಾಡಿದರು. ಕ್ಷೇತ್ರದಲ್ಲಿ ನಡೆಯುವ ಮಹಾ ಅನ್ನ ಸಂತರ್ಪಣೆ ಕಾರ್ಯದಲ್ಲಿ 15000 ಕ್ಕೂ ಮಿಕ್ಕಿ ಭಕ್ತರು ಅನ್ನ ಪ್ರಸಾದ ಸ್ವೀಕಾರ ಮಾಡಿ ದೈವದ ಕೃಪೆಗೆ ಪಾತ್ರರದರು.

ಈ ನೇಮೋತ್ಸವಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೋಟ್ಯಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಬೆಳ್ತಂಗಡಿ, ಮಾಜಿ ಶಾಸಕರು ಆದ ಸಂಜೀವ ಗೌಡ ಪುತ್ತೂರು, ಕಿರಣ್ ಚಂದ್ರ ಪುಷ್ಪಗಿರಿ, ಹಾಗೂ ಅನೇಕ ದೈವಸ್ಥಾನ ಮತ್ತು ದೇವಸ್ಥಾನ ದ ಆಡಳಿತದಾರರು ಭಾಗವಹಿಸಿದರು.

Related posts

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya
error: Content is protected !!