26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಮುಗೇರಡ್ಕ: ಮೂವರು ದೈವಗಳ ದೈವಸ್ಥಾನ ಮುಗೇರಡ್ಕದ ವಾರ್ಷಿಕ ನೇಮೋತ್ಸವ ಮಕರ ಸಂಕ್ರಮಣದಂದು ಗೊನೆ ಮಹೂರ್ತವಾಗಿ ಜ. 18ಕ್ಕೆ ಕೋಳಿಗೂಟ, ಜ.22 ನೇ ರಾತ್ರಿ ಅಂತರ ಮತ್ತು ದೇವಸ್ಯ ಬಂಡಾರ ಮನೆಯಿಂದ ಮುಗೇರಡ್ಕ ಕ್ಷೇತ್ರಕ್ಕೆ ದೈವದ ಭಂಡಾರ ಆಗಮಿಸಿದ ನಂತರ ಶಿರಾಡಿ ದೈವಕ್ಕೆ ಹೊಸದಾಗಿ ನಿರ್ಮಾಣ ಮಾಡಿದ ಹುಲಿ ಬಂಡಿ ಒಪ್ಪಿಸುವ ಕಾರ್ಯಕ್ರಮ ಮದ್ಯ ರಾತ್ರಿ ಜರುಗಿತು.

ನಂತರ ದೈವಂಕುಲು, ಬಿರ್ಮೆರ್, ಕುಮಾರ, ಗಿಳಿರಾಮ, ಬಸ್ತಿನಾಯ್ಕ ಇನ್ನಿತರ ಪರಿವಾರ ದೈವಗಳ ನೇಮ ಕಾರ್ಯ ನಡೆಯಿತು. ಜ.23ರಂದು ಕಲ್ಕುಡ ದೈವ ಪಿಲಿಚಾಮುಂಡಿ ದೈವ ಹಾಗೂ ಶಿರಾಡಿ ದೈವದ ಗಗ್ಗರ ಸೇವೆ ಆರಂಭವಾಗಿ ದಿನವಿಡೀ ದೈವದ ಸೇವೆಗಳು ನಡೆಯಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಮನದ ಕೋರಿಕೆಗಳನ್ನು ಪ್ರಾರ್ಥನೆ ಮಾಡಿ ಹರಕೆ ಒಪ್ಪಿಸಿ ದೈವದ ಗಂಧ ಪ್ರಸಾದ ಸ್ವೀಕಾರ ಮಾಡಿದರು. ಕ್ಷೇತ್ರದಲ್ಲಿ ನಡೆಯುವ ಮಹಾ ಅನ್ನ ಸಂತರ್ಪಣೆ ಕಾರ್ಯದಲ್ಲಿ 15000 ಕ್ಕೂ ಮಿಕ್ಕಿ ಭಕ್ತರು ಅನ್ನ ಪ್ರಸಾದ ಸ್ವೀಕಾರ ಮಾಡಿ ದೈವದ ಕೃಪೆಗೆ ಪಾತ್ರರದರು.

ಈ ನೇಮೋತ್ಸವಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೋಟ್ಯಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಬೆಳ್ತಂಗಡಿ, ಮಾಜಿ ಶಾಸಕರು ಆದ ಸಂಜೀವ ಗೌಡ ಪುತ್ತೂರು, ಕಿರಣ್ ಚಂದ್ರ ಪುಷ್ಪಗಿರಿ, ಹಾಗೂ ಅನೇಕ ದೈವಸ್ಥಾನ ಮತ್ತು ದೇವಸ್ಥಾನ ದ ಆಡಳಿತದಾರರು ಭಾಗವಹಿಸಿದರು.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯ ವಿದ್ಯಾರ್ಥಿಗಳು ಬುಲ್ ಬುಲ್ಸ್ ಗೀತಾ ಗಾಯನದಲ್ಲಿ ದ್ವಿತೀಯ

Suddi Udaya

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!