25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತದಲ್ಲಿರುವ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದಲ್ಲಿ ಮಾರ್ಚ್ 3ರಿಂದ 7ರವರೆಗೆ ಜರಗಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕಾರ್ಯಾಲಯವು ಜ.22ರಂದು ಶ್ರೀ ಶ್ರೀನಿವಾಸ ಮತ್ತು ಶ್ರೀ ಮಂಜುನಾಥ ದೇವರ ಪ್ರಸಾದ ಹಾಕಿ ದೀಪ ಬೆಳಗಿಸುವುದರ ಮುಖೇನ ಚಾಲನೆಗೊಳಿಸಲಾಯಿತು.

ಡಿ ಹರ್ಷೇಂದ್ರ ಕುಮಾರ್‌ರವರ ಮಾರ್ಗದರ್ಶನದಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಎಲ್ಲಾ ಕಾರ್ಯಚಟುವಟಿಕೆಗಳ ಬಗ್ಗೆ ವ್ಯವಸ್ಥಿತವಾದ ಕಾರ್ಯಾಲಯವನ್ನು ಶಾಂತಿವನ ಟ್ರಸ್ಟ್ ಧರ್ಮಸ್ಥಳದ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ತಾಡಿತ್ತಾಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್, ಸೋಮನಾಥ ಶೆಟ್ಟಿ ಪರೀಕ ಅರಮನೆ, ನಂದಕುಮಾರ್ ಉಡುಪಿ, ಕ್ಷೇತ್ರದಿಂದ ಲೆಕ್ಕಾಧಿಕಾರಿಯಾಗಿ ನೇಮಕವಾಗಿರುವ ರಾಜೇಶ್ ಜೈನ್, ಶ್ರೀ ವಜ್ರನಾಭಯ್ಯ, ಅಕೌಂಟ್ಸ್ ಆಫೀಸಿನ ವಿಶ್ವನಾಥ, ಸೌಖ್ಯವನ ಪರೀಕ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ| ಗೋಪಾಲ ಪೂಜಾರಿ, ಡಾ| ಶೋಭಿತ್ ಶೆಟ್ಟಿ, ಡಾ| ಪೂಜಾ ಜಿ ಹಾಗೂ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸೌಖ್ಯವನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಬ್ರಹ್ಮಕಲಶದ ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಾಲಯದ ಮಹತ್ವವನ್ನು ತಿಳಿಸಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಉಜಿರೆ ಬದುಕು‌ ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya
error: Content is protected !!