September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತದಲ್ಲಿರುವ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದಲ್ಲಿ ಮಾರ್ಚ್ 3ರಿಂದ 7ರವರೆಗೆ ಜರಗಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕಾರ್ಯಾಲಯವು ಜ.22ರಂದು ಶ್ರೀ ಶ್ರೀನಿವಾಸ ಮತ್ತು ಶ್ರೀ ಮಂಜುನಾಥ ದೇವರ ಪ್ರಸಾದ ಹಾಕಿ ದೀಪ ಬೆಳಗಿಸುವುದರ ಮುಖೇನ ಚಾಲನೆಗೊಳಿಸಲಾಯಿತು.

ಡಿ ಹರ್ಷೇಂದ್ರ ಕುಮಾರ್‌ರವರ ಮಾರ್ಗದರ್ಶನದಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಎಲ್ಲಾ ಕಾರ್ಯಚಟುವಟಿಕೆಗಳ ಬಗ್ಗೆ ವ್ಯವಸ್ಥಿತವಾದ ಕಾರ್ಯಾಲಯವನ್ನು ಶಾಂತಿವನ ಟ್ರಸ್ಟ್ ಧರ್ಮಸ್ಥಳದ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ತಾಡಿತ್ತಾಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್, ಸೋಮನಾಥ ಶೆಟ್ಟಿ ಪರೀಕ ಅರಮನೆ, ನಂದಕುಮಾರ್ ಉಡುಪಿ, ಕ್ಷೇತ್ರದಿಂದ ಲೆಕ್ಕಾಧಿಕಾರಿಯಾಗಿ ನೇಮಕವಾಗಿರುವ ರಾಜೇಶ್ ಜೈನ್, ಶ್ರೀ ವಜ್ರನಾಭಯ್ಯ, ಅಕೌಂಟ್ಸ್ ಆಫೀಸಿನ ವಿಶ್ವನಾಥ, ಸೌಖ್ಯವನ ಪರೀಕ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ| ಗೋಪಾಲ ಪೂಜಾರಿ, ಡಾ| ಶೋಭಿತ್ ಶೆಟ್ಟಿ, ಡಾ| ಪೂಜಾ ಜಿ ಹಾಗೂ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸೌಖ್ಯವನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಬ್ರಹ್ಮಕಲಶದ ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಾಲಯದ ಮಹತ್ವವನ್ನು ತಿಳಿಸಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಡಾ| ಪ್ರದೀಪ್, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!