July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದ ಬ್ರಹ್ಮಕಲಶೋತ್ಸವದ ಕಛೇರಿ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಆಡಳಿತದಲ್ಲಿರುವ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷರಾಗಿರುವ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಸೌಖ್ಯವನ ಪರೀಕದಲ್ಲಿ ಮಾರ್ಚ್ 3ರಿಂದ 7ರವರೆಗೆ ಜರಗಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕಾರ್ಯಾಲಯವು ಜ.22ರಂದು ಶ್ರೀ ಶ್ರೀನಿವಾಸ ಮತ್ತು ಶ್ರೀ ಮಂಜುನಾಥ ದೇವರ ಪ್ರಸಾದ ಹಾಕಿ ದೀಪ ಬೆಳಗಿಸುವುದರ ಮುಖೇನ ಚಾಲನೆಗೊಳಿಸಲಾಯಿತು.

ಡಿ ಹರ್ಷೇಂದ್ರ ಕುಮಾರ್‌ರವರ ಮಾರ್ಗದರ್ಶನದಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಎಲ್ಲಾ ಕಾರ್ಯಚಟುವಟಿಕೆಗಳ ಬಗ್ಗೆ ವ್ಯವಸ್ಥಿತವಾದ ಕಾರ್ಯಾಲಯವನ್ನು ಶಾಂತಿವನ ಟ್ರಸ್ಟ್ ಧರ್ಮಸ್ಥಳದ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ತಾಡಿತ್ತಾಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡ, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್, ಸೋಮನಾಥ ಶೆಟ್ಟಿ ಪರೀಕ ಅರಮನೆ, ನಂದಕುಮಾರ್ ಉಡುಪಿ, ಕ್ಷೇತ್ರದಿಂದ ಲೆಕ್ಕಾಧಿಕಾರಿಯಾಗಿ ನೇಮಕವಾಗಿರುವ ರಾಜೇಶ್ ಜೈನ್, ಶ್ರೀ ವಜ್ರನಾಭಯ್ಯ, ಅಕೌಂಟ್ಸ್ ಆಫೀಸಿನ ವಿಶ್ವನಾಥ, ಸೌಖ್ಯವನ ಪರೀಕ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ| ಗೋಪಾಲ ಪೂಜಾರಿ, ಡಾ| ಶೋಭಿತ್ ಶೆಟ್ಟಿ, ಡಾ| ಪೂಜಾ ಜಿ ಹಾಗೂ ಆಡಳಿತ ವಿಭಾಗದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸೌಖ್ಯವನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಬ್ರಹ್ಮಕಲಶದ ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಾಲಯದ ಮಹತ್ವವನ್ನು ತಿಳಿಸಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya
error: Content is protected !!