September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಸೌತಡ್ಕ ದೇವಾಲಯಗಳಲ್ಲಿ ಇತ್ತೀಚೆಗೆ ರಚಿಸಿರುವ “ಸೌತಡ್ಕ ಸಂರಕ್ಷಣಾ ವೇದಿಕೆ” ಯ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ ಎಂಬವರು ಈ ಹಿಂದೆ ಮಾಡಿರುವ ಹಿಂದೂ ಧಾರ್ಮಿಕ ಇಲಾಖೆಯ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ತಿಳಿಸಿದರು.

ಅವರು ಜ.25 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇತ್ತೀಚೆಗೆ ರಚಿಸಲಾಗಿರುವ ಸೌತಡ್ಕ ಸಂರಕ್ಷಣಾ ವೇದಿಕೆ” ಎಂಬ ಹೆಸರಿನಲ್ಲಿ ಸೌತಡ್ಕ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಇತರ 4 ಮಂದಿ ಸದಸ್ಯರು ನೂತನ ವ್ಯವಸ್ಥಾಪನಾ ಸಮಿತಿಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವ ಬಗ್ಗೆ ಪತ್ರಿಕೆಯಲ್ಲಿ ವರದಿಯಾದ ಮಾಹಿತಿಯನ್ನು ಪಡಕೊಂಡಿದ್ದು ಇವರುಗಳನ್ನು ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಮರು ಆಯ್ಕೆ ಮಾಡದಂತೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಧ್ಯಕ್ಷರಾದ ಮಾನ್ಯ ದತ್ತಿ ಇಲಾಖಾ ಸಚಿವರಿಗೆ ಮತ್ತು ಆಯುಕ್ತರೊಂದಿಗೆ 8 ಮಂದಿ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರುಗಳಿಗೆ ಲಿಖಿತ ದೂರುಗಳನ್ನು ನೀಡಿರುತ್ತೇವೆ.

ಸೌತಡ್ಕ ದೇವಾಲಯದಲ್ಲಿ ಕಾನೂನು ಬಾಹಿರವಾಗಿ ಮತ್ತು ದತ್ತಿ ಇಲಾಖೆಯ ನಿಯಮಗಳನ್ನು ಉಲ್ಲಂಘನೆ ಮಾಡಿ ನಡೆಸಿರುವ ಭಕ್ತಾದಿಗಳು ದೇವರಿಗೆ ಸಮರ್ಪಿಸಿರುವ ಹರಕೆ ಗಂಟೆಗಳ ಹರಾಜಿನ ಅವ್ಯವಹಾರ ಮತ್ತು ಸುಧೀರ್ಘ 19 ವರ್ಷ ದೇವಳದ ಸಮಿತಿಯಲ್ಲಿ ಸದಸ್ಯರಾಗಿದ್ದು ದೇವಳದ ಪ್ರತಿ ಹುಂಡಿ ಎಣಿಕೆ ಮಾಡುವ ಸಮಯದಲ್ಲಿ ಸ್ವಲ್ಪ ಸ್ವಲ್ಪ ಹಣ ತೆಗೆದಿರಿಸಿ ಆಸ್ತಿ ಖರೀದಿಯ ಸಾಲವನ್ನು ಮರು ಪಾವತಿ ಮಾಡಿರುವ ವಿಶ್ವನಾಥ ಪೂಜಾರಿ ಇವರ ಪತ್ರಿಕಾ ಹೇಳಿಕೆಯ ಅವ್ಯವಹಾರದ ಮರು ತನಿಖೆಯನ್ನು ನಡೆಸುವಂತೆ ಈ ಹಿಂದೆ ಮನವಿಯನ್ನು ಸಲ್ಲಿಸಿರುತ್ತೇವೆ.

2017 ರಿಂದ 2020 ನೇ ಸಾಲಿನ ವ್ಯವಸ್ಥಾಪನಾ ಸಮಿತಿಯು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೇಗುಲದ ಶ್ರೀ ಗಣೇಶ ಕಲಾ ಮಂದಿರದ ಬಲ ಭಾಗದಲ್ಲಿದ್ದ ಹಣ್ಣು ಕಾಯಿಯೊಂದಿಗೆ ಗಂಟೆ ಅಂಗಡಿ, ಮತ್ತು ಕ್ಷೇತ್ರದ ಪ್ರಸಿದ್ದ ಪ್ರಸಾದವಾದ ಅವಲಕ್ಕಿ ಪಂಚಕಜ್ಜಾಯ ತಯಾರಿ ಟೆಂಡರ್ ವ್ಯವಸ್ಥೆಯಲ್ಲಿ ಮತ್ತು ಸಿ. ಸಿ. ಕ್ಯಾಮರಾ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ಅವ್ಯವಹಾರ ನಡೆಸಿ, ದೇಗುಲದ ವ್ಯವಸ್ಥೆಗೆ ನಷ್ಟ ಉಂಟುಮಾಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಠಲ ಕುರ್ಲೆ ಹಾಗೂ ಪುರಂದರ ಕಡೀರ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!