April 21, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

ಬಂಗಾಡಿ: ಇಂದುಬೆಟ್ಟು ಗ್ರಾಮದ ಶ್ರೀ ಬಂಗಾಡಿ ಹಾಡಿ ದೈವ ದೈವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ ಬೆದ್ರಬೆಟ್ಟು ಇವರು ನೇಮಕಗೊಂಡಿದ್ದಾರೆ.


ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯು ಬಂಗಾಡಿ ಶ್ರೀ ಹಾಡಿದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ನೇಮಕಗೊಳಿಸಿ ಆದೇಶ ನೀಡಿದ್ದು, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮುಕುಂದ ಸುವರ್ಣ ಅವರು ನೇಮಕಗೊಂಡಿದ್ದಾರೆ.

ಇವರು ಬೆಳ್ತಂಗಡಿ ಭೂ ನ್ಯಾಯಮಂಡಳಿಯ ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಪಂಚಾಯತದ ಸದಸ್ಯರಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಸಮಿತಿಯ ಸದಸ್ಯರಾಗಿ ರವಿ ನೇತ್ರಾವತಿ ನಗರ ಇಂದಬೆಟ್ಟು, ಶ್ರೀಮತಿ ರೋಹಿಣಿ ಧರ್ಣಪ್ಪ ಪೂಜಾರಿ, ಕೊಪ್ಪದ ಕೋಡಿ ಇಂದಬೆಟ್ಟು, ಶ್ರೀಮತಿ ಚಂದ್ರಾವತಿ ಕುಶಾಲಪ್ಪ, ಕಾರಿಂಜ ಮನೆ ನಾವೂರು, ಸುರೇಶ್ ಪರಾರಿ ಮನೆ ನಾವೂರು, ಗಣೇಶ್ ಪ್ರಸಾದ್.ಡಿ ತಾರಕೂಟೇಲು ಇಂದಬೆಟ್ಟು, ದೇಜಪ್ಪ ಗೌಡ ಕುಂಡಡ್ಕ ಮನೆ ನಾವೂರು. ಎಚ್. ರಾಮಕೃಷ್ಣ ಗೌಡ ಹಣಿಬೆಟ್ಟು ಮನೆ ಇಂದಬೆಟ್ಟು ಹಾಗೂ ಪ್ರಧಾನ ಅರ್ಚಕರು ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

Related posts

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya
error: Content is protected !!