September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಜ.25 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಆರ್ಯಭಟ ಪ್ರಶಸ್ತಿ ಪುರಸ್ಕೃತರಾದ ಉದಯ್ ಕುಮಾರ್ ಲಾಯಿಲ, ಸಮೂಹ ಸಂಪನ್ಮೂಲ ವ್ಯಕ್ತಿ ಗುರುವಾಯನಕೆರೆ ಕ್ಲಸ್ಟರ್ ರಾಜೇಶ್, ಸ್ಪರ್ಧಾ ತೀರ್ಪುಗಾರರಾಗಿ ಗಣೇಶ್ ಆಚಾರ್ಯ ಗುಂಪಲಾಜೆ ಉಪಸ್ಥಿತರಿದ್ದರು.

ತಾಲೂಕಿನ 18 ಸರಕಾರಿ ಶಾಲೆಗಳಲ್ಲಿ 600 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಿದ್ದು, ಅದರಲ್ಲಿ ಆಯ್ದ 50 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅಂತಿಮ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ನಂತರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

1-5ನೇ ತರಗತಿ ವಿಜೇತರು: ಪ್ರಥಮ – ಗೌತಮಿ ಮೇಲಂತಬೆಟ್ಟು ಶಾಲೆ, ದ್ವಿತೀಯ -ಅನ್ವಿತಾ ಹಳೆಪೇಟೆ ಶಾಲೆ, ತೃತೀಯ- ಮನೀಶ್ ಹುಣ್ಸೆಕಟ್ಟೆ.

6-7ನೇ ತರಗತಿ ವಿಜೇತರು: ಪ್ರಥಮ – ಸಮೀಕ್ಷಾ ಇಂದಬೆಟ್ಟು ಶಾಲೆ, ದ್ವಿತೀಯ – ಸಂನಾಝ್ – ಹಳೆಪೇಟೆ ಶಾಲೆ,
ತೃತೀಯ – ಜಾನ್ವಿ ಮಾದರಿ ಶಾಲೆ ಬೆಳ್ತಂಗಡಿ,

ಬೆಳ್ತಂಗಡಿ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ರೋಹಿತಾಕ್ಷ ನಿರೂಪಿಸಿ ವಂದಿಸಿದರು.

ಈ ಸಂದರ್ಭದಲ್ಲಿ ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು, ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya

ಶಿಶಿಲ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜರಿಗೆ ನೀಡಿ ಆಹ್ವಾನ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ

Suddi Udaya

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya
error: Content is protected !!