23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

ಮಡಂತ್ಯಾರು : ಬಂಟರ ಸಂಘ ಮಡಂತ್ಯಾರು ವಲಯದ ವಲಯ ಬಂಟರ ಕ್ರೀಡೋತ್ಸವ 2025 ಜ.19 ರಂದು ಗರ್ಡಾಡಿ ಯುವಕ ಮಂಡಲದ ಕ್ರೀಡಾಂಗಣದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ದಿವಾಕರ ಶೆಟ್ಟಿ ಕಂಗಿತ್ತಿಲು ವಹಿಸಿದರು. ಕಾರ್ಯಕ್ರಮವನ್ನು ಕಂಬಳ ಕ್ರೀಡೆಯಲ್ಲಿ ಹೆಸರುಮಾಡಿದ ಹಂಕಾರ್ಜಾಲು ಶ್ರೀನಿವಾಸ್ ಶೆಟ್ರ ಹಾಗೂ ವಲಯ ಗೌರವ ಅಧ್ಯಕ್ಷ ವಿಠ್ಠಲ ಶೆಟ್ಟಿ ಮೂಡಯೂರು ಅವರ ಅಮೃತ ಹಸ್ತದಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ ಪೂಂಜ, ಶಶಿಧರ ಶೆಟ್ಟಿ ನವಶಕ್ತಿ, ಶ್ರೀಮತಿ ಜಯಲಕ್ಷ್ಮಿ ಎಂ ಸಾಮನಿ, ಶ್ರೀಮತಿ ನಳಿನಿ ಪೂಂಜಾ, ಶ್ರೀಮತಿ ಮೀನಾಕ್ಷಿ ಶೆಟ್ಟಿ, ಜಯರಾಮ ಶೆಟ್ಟಿ ಮುಂಡಾಡಿ ಗುತ್ತು, ರಾಜೇಶ್ ಶೆಟ್ಟಿ ನವಶಕ್ತಿ, ಅಜಿತ್ ಕುಮಾರ್ ಶೆಟ್ಟಿ ಕೊರಿಯರ್, ರಘುನಾಥ ರೈ, ಎಂ ಜಯರಾಮ ಭಂಡಾರಿ, ಸುರೇಶ್ ಶೆಟ್ಟಿ ಬೊಲ್ಲಜೆ, ರಾಜೇಶ್ ಶೆಟ್ಟಿ ಲಾಯಿಲ, ವಸಂತ ಶೆಟ್ಟಿ ಶ್ರದ್ದಾ ಪ್ರಿಂಟರ್ಸ್, ನವೀನ್ ಕೆ. ಸಾಮನಿ, ಪುಷ್ಪರಾಜ್ ಶೆಟ್ಟಿ ಭಾಗವಹಿಸಿದ್ದರು.

ವಲಯ ಕಾರ್ಯದರ್ಶಿಯಾದ ನಾರಾಯಣ ಶೆಟ್ಟಿ ನೆತ್ತರ ಪ್ರಾಸ್ತಾವಿಕವಾಗಿ ಮಾತಾಡಿ ಈ ಕ್ರೀಡಾಕೂಟದ ಉದ್ದೇಶ ಹಾಗೂ ಒಗ್ಗಟ್ಟಿನ ಬಗ್ಗೆ ತಿಳಿಸಿದರು. ದಿನ ಪೂರ್ತಿ ನಡೆದ ಅನೇಕ ಗ್ರಾಮೀಣ ಕ್ರೀಡೆಗಳ ಕ್ರೀಡೋತ್ಸವದಲ್ಲಿ ಬಂಟ ಮಕ್ಕಳು ಮಹಿಳೆಯರು ಸೇರಿದಂತೆ ಸುಮಾರು 1000 ಕ್ಕೂ ಹೆಚ್ಚು ಜನ ಭಾಗವಹಿಸಿದ್ದು ಕಾರ್ಯಕ್ರಮದ ಮೆರಗು ಹೆಚ್ಚಿಸಿತ್ತು.

ಸಂಜೆಯ ಸಮಾರೋಪದಲ್ಲಿ ಅಧ್ಯಕ್ಷರಾಗಿ ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡರುಗುಡ್ಡೆ ವಹಿಸಿದರು. ಸುಬ್ಬಯ ರೈ ಇಚ್ಲಂಪಾಡಿ ಅಧ್ಯಕ್ಷರು ಬಂಟರ ಯಾನೆ ನಾಡವರ ಸಂಘ ಕಾಸರಗೋಡು, ನಿತ್ಯಾನಂದ ಶೆಟ್ಟಿ ಉದ್ಯಮಿಗಳು, ಶ್ರೀಮತಿ ದಿವ್ಯಶೆಟ್ಟಿ ಗುಜ್ಜೋಟ್ಟು, ದಿವಾಕರ ಶೆಟ್ಟಿ ಕಂಗಿತ್ತಿಲು, ರಾಜಶೇಖರ ಶೆಟ್ಟಿ ಭಂದರಿಗುಡ್ಡೆ, ಶ್ರೀನಿವಾಸ ಶೆಟ್ಟಿ ಹಂಕರ್ಜಾಲು ಭಾಗವಹಿಸಿದ್ದರು.

ಚೇತನ್ ಮುಂಡಾಡಿ ಅವರನ್ನು ವಲಯ ಬಂಟ ಕಲಾ ರತ್ನ ಪ್ರಶಸ್ತಿ ಹಾಗೂ ಸುಶಾಂತ್ ಶೆಟ್ಟಿ ಅವರನ್ನು ವಲಯ ಬಂಟ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮಗಳಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪದೆಂಜಿಲ , ಶಿವಶಂಕರ್ ಶೆಟ್ಟಿ ಮೂಡಾಯೂರು, ದಿವಾಕರ ಶೆಟ್ಟಿ ಹಂಕರ್ಜಾಳು ಸಹಕರಿಸಿದರು, ಕಾರ್ಯಕ್ರಮವನ್ನು ಸುರೇಶ್ ಶೆಟ್ಟಿ , ಭರತ್ ಶೆಟ್ಟಿ, ಯಶ್ವಂತ್ ಶೆಟ್ಟಿ ಹಾಗೂ ಸುಜಯ್ ಶೆಟ್ಟಿ ನಡೆಸಿಕೊಟ್ಟರು..

Related posts

ಎಸ್.ಐ.ಟಿ ತಂಡ ಬೆಳ್ತಂಗಡಿ ಕಚೇರಿಗೆ ಆಗಮನ: ಇಂದು ತಲೆಬುರುಡೆ ತೆಗೆದ ಸ್ಥಳ ಮಹಜರು ಸಾಧ್ಯತೆ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya
error: Content is protected !!