ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಮುಗೇರಡ್ಕ: ಮೂವರು ದೈವಗಳ ದೈವಸ್ಥಾನ ಮುಗೇರಡ್ಕದ ವಾರ್ಷಿಕ ನೇಮೋತ್ಸವ ಮಕರ ಸಂಕ್ರಮಣದಂದು ಗೊನೆ ಮಹೂರ್ತವಾಗಿ ಜ. 18ಕ್ಕೆ ಕೋಳಿಗೂಟ, ಜ.22 ನೇ ರಾತ್ರಿ ಅಂತರ ಮತ್ತು ದೇವಸ್ಯ ಬಂಡಾರ ಮನೆಯಿಂದ ಮುಗೇರಡ್ಕ ಕ್ಷೇತ್ರಕ್ಕೆ ದೈವದ ಭಂಡಾರ ಆಗಮಿಸಿದ ನಂತರ ಶಿರಾಡಿ ದೈವಕ್ಕೆ ಹೊಸದಾಗಿ ನಿರ್ಮಾಣ ಮಾಡಿದ ಹುಲಿ ಬಂಡಿ ಒಪ್ಪಿಸುವ ಕಾರ್ಯಕ್ರಮ ಮದ್ಯ ರಾತ್ರಿ ಜರುಗಿತು.

ನಂತರ ದೈವಂಕುಲು, ಬಿರ್ಮೆರ್, ಕುಮಾರ, ಗಿಳಿರಾಮ, ಬಸ್ತಿನಾಯ್ಕ ಇನ್ನಿತರ ಪರಿವಾರ ದೈವಗಳ ನೇಮ ಕಾರ್ಯ ನಡೆಯಿತು. ಜ.23ರಂದು ಕಲ್ಕುಡ ದೈವ ಪಿಲಿಚಾಮುಂಡಿ ದೈವ ಹಾಗೂ ಶಿರಾಡಿ ದೈವದ ಗಗ್ಗರ ಸೇವೆ ಆರಂಭವಾಗಿ ದಿನವಿಡೀ ದೈವದ ಸೇವೆಗಳು ನಡೆಯಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಮನದ ಕೋರಿಕೆಗಳನ್ನು ಪ್ರಾರ್ಥನೆ ಮಾಡಿ ಹರಕೆ ಒಪ್ಪಿಸಿ ದೈವದ ಗಂಧ ಪ್ರಸಾದ ಸ್ವೀಕಾರ ಮಾಡಿದರು. ಕ್ಷೇತ್ರದಲ್ಲಿ ನಡೆಯುವ ಮಹಾ ಅನ್ನ ಸಂತರ್ಪಣೆ ಕಾರ್ಯದಲ್ಲಿ 15000 ಕ್ಕೂ ಮಿಕ್ಕಿ ಭಕ್ತರು ಅನ್ನ ಪ್ರಸಾದ ಸ್ವೀಕಾರ ಮಾಡಿ ದೈವದ ಕೃಪೆಗೆ ಪಾತ್ರರದರು.

ಈ ನೇಮೋತ್ಸವಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೋಟ್ಯಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಬೆಳ್ತಂಗಡಿ, ಮಾಜಿ ಶಾಸಕರು ಆದ ಸಂಜೀವ ಗೌಡ ಪುತ್ತೂರು, ಕಿರಣ್ ಚಂದ್ರ ಪುಷ್ಪಗಿರಿ, ಹಾಗೂ ಅನೇಕ ದೈವಸ್ಥಾನ ಮತ್ತು ದೇವಸ್ಥಾನ ದ ಆಡಳಿತದಾರರು ಭಾಗವಹಿಸಿದರು.

Related posts

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಸಾಧನೆ

Suddi Udaya

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya
error: Content is protected !!