25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಮುಗೇರಡ್ಕ: ಮೂವರು ದೈವಗಳ ದೈವಸ್ಥಾನ ಮುಗೇರಡ್ಕದ ವಾರ್ಷಿಕ ನೇಮೋತ್ಸವ ಮಕರ ಸಂಕ್ರಮಣದಂದು ಗೊನೆ ಮಹೂರ್ತವಾಗಿ ಜ. 18ಕ್ಕೆ ಕೋಳಿಗೂಟ, ಜ.22 ನೇ ರಾತ್ರಿ ಅಂತರ ಮತ್ತು ದೇವಸ್ಯ ಬಂಡಾರ ಮನೆಯಿಂದ ಮುಗೇರಡ್ಕ ಕ್ಷೇತ್ರಕ್ಕೆ ದೈವದ ಭಂಡಾರ ಆಗಮಿಸಿದ ನಂತರ ಶಿರಾಡಿ ದೈವಕ್ಕೆ ಹೊಸದಾಗಿ ನಿರ್ಮಾಣ ಮಾಡಿದ ಹುಲಿ ಬಂಡಿ ಒಪ್ಪಿಸುವ ಕಾರ್ಯಕ್ರಮ ಮದ್ಯ ರಾತ್ರಿ ಜರುಗಿತು.

ನಂತರ ದೈವಂಕುಲು, ಬಿರ್ಮೆರ್, ಕುಮಾರ, ಗಿಳಿರಾಮ, ಬಸ್ತಿನಾಯ್ಕ ಇನ್ನಿತರ ಪರಿವಾರ ದೈವಗಳ ನೇಮ ಕಾರ್ಯ ನಡೆಯಿತು. ಜ.23ರಂದು ಕಲ್ಕುಡ ದೈವ ಪಿಲಿಚಾಮುಂಡಿ ದೈವ ಹಾಗೂ ಶಿರಾಡಿ ದೈವದ ಗಗ್ಗರ ಸೇವೆ ಆರಂಭವಾಗಿ ದಿನವಿಡೀ ದೈವದ ಸೇವೆಗಳು ನಡೆಯಿತು.

ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಮನದ ಕೋರಿಕೆಗಳನ್ನು ಪ್ರಾರ್ಥನೆ ಮಾಡಿ ಹರಕೆ ಒಪ್ಪಿಸಿ ದೈವದ ಗಂಧ ಪ್ರಸಾದ ಸ್ವೀಕಾರ ಮಾಡಿದರು. ಕ್ಷೇತ್ರದಲ್ಲಿ ನಡೆಯುವ ಮಹಾ ಅನ್ನ ಸಂತರ್ಪಣೆ ಕಾರ್ಯದಲ್ಲಿ 15000 ಕ್ಕೂ ಮಿಕ್ಕಿ ಭಕ್ತರು ಅನ್ನ ಪ್ರಸಾದ ಸ್ವೀಕಾರ ಮಾಡಿ ದೈವದ ಕೃಪೆಗೆ ಪಾತ್ರರದರು.

ಈ ನೇಮೋತ್ಸವಕ್ಕೆ ಲೋಕಸಭಾ ಸದಸ್ಯರಾದ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೋಟ್ಯಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಬೆಳ್ತಂಗಡಿ, ಮಾಜಿ ಶಾಸಕರು ಆದ ಸಂಜೀವ ಗೌಡ ಪುತ್ತೂರು, ಕಿರಣ್ ಚಂದ್ರ ಪುಷ್ಪಗಿರಿ, ಹಾಗೂ ಅನೇಕ ದೈವಸ್ಥಾನ ಮತ್ತು ದೇವಸ್ಥಾನ ದ ಆಡಳಿತದಾರರು ಭಾಗವಹಿಸಿದರು.

Related posts

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!