April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಸೌತಡ್ಕ ದೇವಾಲಯಗಳಲ್ಲಿ ಇತ್ತೀಚೆಗೆ ರಚಿಸಿರುವ “ಸೌತಡ್ಕ ಸಂರಕ್ಷಣಾ ವೇದಿಕೆ” ಯ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ ಎಂಬವರು ಈ ಹಿಂದೆ ಮಾಡಿರುವ ಹಿಂದೂ ಧಾರ್ಮಿಕ ಇಲಾಖೆಯ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ತಿಳಿಸಿದರು.

ಅವರು ಜ.25 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇತ್ತೀಚೆಗೆ ರಚಿಸಲಾಗಿರುವ ಸೌತಡ್ಕ ಸಂರಕ್ಷಣಾ ವೇದಿಕೆ” ಎಂಬ ಹೆಸರಿನಲ್ಲಿ ಸೌತಡ್ಕ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಇತರ 4 ಮಂದಿ ಸದಸ್ಯರು ನೂತನ ವ್ಯವಸ್ಥಾಪನಾ ಸಮಿತಿಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವ ಬಗ್ಗೆ ಪತ್ರಿಕೆಯಲ್ಲಿ ವರದಿಯಾದ ಮಾಹಿತಿಯನ್ನು ಪಡಕೊಂಡಿದ್ದು ಇವರುಗಳನ್ನು ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಮರು ಆಯ್ಕೆ ಮಾಡದಂತೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಧ್ಯಕ್ಷರಾದ ಮಾನ್ಯ ದತ್ತಿ ಇಲಾಖಾ ಸಚಿವರಿಗೆ ಮತ್ತು ಆಯುಕ್ತರೊಂದಿಗೆ 8 ಮಂದಿ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರುಗಳಿಗೆ ಲಿಖಿತ ದೂರುಗಳನ್ನು ನೀಡಿರುತ್ತೇವೆ.

ಸೌತಡ್ಕ ದೇವಾಲಯದಲ್ಲಿ ಕಾನೂನು ಬಾಹಿರವಾಗಿ ಮತ್ತು ದತ್ತಿ ಇಲಾಖೆಯ ನಿಯಮಗಳನ್ನು ಉಲ್ಲಂಘನೆ ಮಾಡಿ ನಡೆಸಿರುವ ಭಕ್ತಾದಿಗಳು ದೇವರಿಗೆ ಸಮರ್ಪಿಸಿರುವ ಹರಕೆ ಗಂಟೆಗಳ ಹರಾಜಿನ ಅವ್ಯವಹಾರ ಮತ್ತು ಸುಧೀರ್ಘ 19 ವರ್ಷ ದೇವಳದ ಸಮಿತಿಯಲ್ಲಿ ಸದಸ್ಯರಾಗಿದ್ದು ದೇವಳದ ಪ್ರತಿ ಹುಂಡಿ ಎಣಿಕೆ ಮಾಡುವ ಸಮಯದಲ್ಲಿ ಸ್ವಲ್ಪ ಸ್ವಲ್ಪ ಹಣ ತೆಗೆದಿರಿಸಿ ಆಸ್ತಿ ಖರೀದಿಯ ಸಾಲವನ್ನು ಮರು ಪಾವತಿ ಮಾಡಿರುವ ವಿಶ್ವನಾಥ ಪೂಜಾರಿ ಇವರ ಪತ್ರಿಕಾ ಹೇಳಿಕೆಯ ಅವ್ಯವಹಾರದ ಮರು ತನಿಖೆಯನ್ನು ನಡೆಸುವಂತೆ ಈ ಹಿಂದೆ ಮನವಿಯನ್ನು ಸಲ್ಲಿಸಿರುತ್ತೇವೆ.

2017 ರಿಂದ 2020 ನೇ ಸಾಲಿನ ವ್ಯವಸ್ಥಾಪನಾ ಸಮಿತಿಯು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೇಗುಲದ ಶ್ರೀ ಗಣೇಶ ಕಲಾ ಮಂದಿರದ ಬಲ ಭಾಗದಲ್ಲಿದ್ದ ಹಣ್ಣು ಕಾಯಿಯೊಂದಿಗೆ ಗಂಟೆ ಅಂಗಡಿ, ಮತ್ತು ಕ್ಷೇತ್ರದ ಪ್ರಸಿದ್ದ ಪ್ರಸಾದವಾದ ಅವಲಕ್ಕಿ ಪಂಚಕಜ್ಜಾಯ ತಯಾರಿ ಟೆಂಡರ್ ವ್ಯವಸ್ಥೆಯಲ್ಲಿ ಮತ್ತು ಸಿ. ಸಿ. ಕ್ಯಾಮರಾ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ಅವ್ಯವಹಾರ ನಡೆಸಿ, ದೇಗುಲದ ವ್ಯವಸ್ಥೆಗೆ ನಷ್ಟ ಉಂಟುಮಾಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಠಲ ಕುರ್ಲೆ ಹಾಗೂ ಪುರಂದರ ಕಡೀರ ಉಪಸ್ಥಿತರಿದ್ದರು.

Related posts

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!