29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಸೌತಡ್ಕ ದೇವಾಲಯಗಳಲ್ಲಿ ಇತ್ತೀಚೆಗೆ ರಚಿಸಿರುವ “ಸೌತಡ್ಕ ಸಂರಕ್ಷಣಾ ವೇದಿಕೆ” ಯ ಸಮಿತಿಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶಬರಾಯ ಎಂಬವರು ಈ ಹಿಂದೆ ಮಾಡಿರುವ ಹಿಂದೂ ಧಾರ್ಮಿಕ ಇಲಾಖೆಯ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ತಿಳಿಸಿದರು.

ಅವರು ಜ.25 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಇತ್ತೀಚೆಗೆ ರಚಿಸಲಾಗಿರುವ ಸೌತಡ್ಕ ಸಂರಕ್ಷಣಾ ವೇದಿಕೆ” ಎಂಬ ಹೆಸರಿನಲ್ಲಿ ಸೌತಡ್ಕ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಮತ್ತು ಇತರ 4 ಮಂದಿ ಸದಸ್ಯರು ನೂತನ ವ್ಯವಸ್ಥಾಪನಾ ಸಮಿತಿಗೆ ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವ ಬಗ್ಗೆ ಪತ್ರಿಕೆಯಲ್ಲಿ ವರದಿಯಾದ ಮಾಹಿತಿಯನ್ನು ಪಡಕೊಂಡಿದ್ದು ಇವರುಗಳನ್ನು ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ಮರು ಆಯ್ಕೆ ಮಾಡದಂತೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಧ್ಯಕ್ಷರಾದ ಮಾನ್ಯ ದತ್ತಿ ಇಲಾಖಾ ಸಚಿವರಿಗೆ ಮತ್ತು ಆಯುಕ್ತರೊಂದಿಗೆ 8 ಮಂದಿ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರುಗಳಿಗೆ ಲಿಖಿತ ದೂರುಗಳನ್ನು ನೀಡಿರುತ್ತೇವೆ.

ಸೌತಡ್ಕ ದೇವಾಲಯದಲ್ಲಿ ಕಾನೂನು ಬಾಹಿರವಾಗಿ ಮತ್ತು ದತ್ತಿ ಇಲಾಖೆಯ ನಿಯಮಗಳನ್ನು ಉಲ್ಲಂಘನೆ ಮಾಡಿ ನಡೆಸಿರುವ ಭಕ್ತಾದಿಗಳು ದೇವರಿಗೆ ಸಮರ್ಪಿಸಿರುವ ಹರಕೆ ಗಂಟೆಗಳ ಹರಾಜಿನ ಅವ್ಯವಹಾರ ಮತ್ತು ಸುಧೀರ್ಘ 19 ವರ್ಷ ದೇವಳದ ಸಮಿತಿಯಲ್ಲಿ ಸದಸ್ಯರಾಗಿದ್ದು ದೇವಳದ ಪ್ರತಿ ಹುಂಡಿ ಎಣಿಕೆ ಮಾಡುವ ಸಮಯದಲ್ಲಿ ಸ್ವಲ್ಪ ಸ್ವಲ್ಪ ಹಣ ತೆಗೆದಿರಿಸಿ ಆಸ್ತಿ ಖರೀದಿಯ ಸಾಲವನ್ನು ಮರು ಪಾವತಿ ಮಾಡಿರುವ ವಿಶ್ವನಾಥ ಪೂಜಾರಿ ಇವರ ಪತ್ರಿಕಾ ಹೇಳಿಕೆಯ ಅವ್ಯವಹಾರದ ಮರು ತನಿಖೆಯನ್ನು ನಡೆಸುವಂತೆ ಈ ಹಿಂದೆ ಮನವಿಯನ್ನು ಸಲ್ಲಿಸಿರುತ್ತೇವೆ.

2017 ರಿಂದ 2020 ನೇ ಸಾಲಿನ ವ್ಯವಸ್ಥಾಪನಾ ಸಮಿತಿಯು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೇಗುಲದ ಶ್ರೀ ಗಣೇಶ ಕಲಾ ಮಂದಿರದ ಬಲ ಭಾಗದಲ್ಲಿದ್ದ ಹಣ್ಣು ಕಾಯಿಯೊಂದಿಗೆ ಗಂಟೆ ಅಂಗಡಿ, ಮತ್ತು ಕ್ಷೇತ್ರದ ಪ್ರಸಿದ್ದ ಪ್ರಸಾದವಾದ ಅವಲಕ್ಕಿ ಪಂಚಕಜ್ಜಾಯ ತಯಾರಿ ಟೆಂಡರ್ ವ್ಯವಸ್ಥೆಯಲ್ಲಿ ಮತ್ತು ಸಿ. ಸಿ. ಕ್ಯಾಮರಾ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ಅವ್ಯವಹಾರ ನಡೆಸಿ, ದೇಗುಲದ ವ್ಯವಸ್ಥೆಗೆ ನಷ್ಟ ಉಂಟುಮಾಡಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಠಲ ಕುರ್ಲೆ ಹಾಗೂ ಪುರಂದರ ಕಡೀರ ಉಪಸ್ಥಿತರಿದ್ದರು.

Related posts

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya
error: Content is protected !!