25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಆಸ್ಪತ್ರೆ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ನೆರವೇರಿಸಿದ ಕರ್ನಲ್ ಎಂ.ಜಿ ಜಯರಾಮ್ ರವರು ಮಾತನಾಡಿ, ದೇಶಸೇವೆ ಸೈನಿಕರಿಗಷ್ಟೇ ಸೀಮಿತವಾಗಬಾರದು, ಪ್ರತಿಯೊಂದು ವೃತ್ತಿಯನ್ನು ನಿಷ್ಠೆಯಿಂದ ಮಾಡಿದಲ್ಲಿ ಅದೂ ದೇಶ ಸೇವೆ ಎನಿಸಿಕೊಳ್ಳುತ್ತದೆ. ದೇಶದ ವಿವಿಧ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗಳಿಗಿಂತ ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಉತ್ಕೃಷ್ಟ ಸಂಸ್ಥೆ ಗುಣಮಟ್ಟದ ಪರಿಪೂರ್ಣ ಚಿಕಿತ್ಸೆಯನ್ನು ನೀಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಅಮೆರಿಕಾದ ಖ್ಯಾತ ಶ್ವಾಸಕೋಶ ರೋಗದ ತಜ್ಞರು ಡಾ ಬಾಲಶೆಟ್ಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ, ಯೋಗ ಮತ್ತು ನೈತಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಶಶಿಕಾಂತ್ ಜೈನ್, ಆಡಳಿತ ಅಧಿಕಾರಿಗಳಾದ ಜಗನ್ನಾಥ, ಸ್ಥಾನಿಕ ವೈದ್ಯಾಧಿಕಾರಿಗಳಾದ ಡಾ. ಬಿಂದು, ಸಮಸ್ತ ವೈದ್ಯಕೀಯ ತಂಡ, ಪ್ರಬಂಧಕರಾದ ಸ್ವಸ್ತಿಕ್, ಸ್ನಾತಕೋತ್ತರ ವಿದ್ಯಾರ್ಥಿಗಳು, ಸ್ಥಾನಿಕ ವೈದ್ಯ ವಿದ್ಯಾರ್ಥಿಗಳು, ಆಸ್ಪತ್ರೆಯ ಸಾಧಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್ ಶೆಟ್ಟಿ ಸ್ವಾಗತಿಸಿ, ಡಾ. ಬಿಂದು ವಂದಿಸಿ, ಡಾ ಗೋವಿಂದನ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ

Suddi Udaya
error: Content is protected !!