April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಸುವ್ಯವಸ್ಥಿತವಾದ ಸಂವಿಧಾನವನ್ನು ಭಾರತ ದೇಶ ಹೊಂದಿದ್ದು ಜಗತ್ತಲ್ಲೇ ಪ್ರಸಿದ್ಧಿಯನ್ನು ಪಡೆದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ ಗೌಡ ಹೇಳಿದರು.

ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ದೇಶದ ಸರ್ವಾಂಗೀಣ ಅಭಿವೃದ್ಧಿಯನ್ನು ಮನಗಂಡು ರಚಿಸಿದ ಸಂವಿಧಾನಕ್ಕೆ ಬದ್ಧರಾಗಿ ಕಾನೂನು ಕ್ರಮಗಳನ್ನು ಪಾಲಿಸಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು ದೇಶಕ್ಕಾಗಿ ಸೇವೆ ಸಲ್ಲಿಸಬೇಕು ಎಂದರು.

ವಾಣಿ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ, ಕಾಲೇಜಿನ ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು. ಶಿಕ್ಷಕಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಬಾಜೆ ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya
error: Content is protected !!