September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಸುವ್ಯವಸ್ಥಿತವಾದ ಸಂವಿಧಾನವನ್ನು ಭಾರತ ದೇಶ ಹೊಂದಿದ್ದು ಜಗತ್ತಲ್ಲೇ ಪ್ರಸಿದ್ಧಿಯನ್ನು ಪಡೆದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ ಗೌಡ ಹೇಳಿದರು.

ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ದೇಶದ ಸರ್ವಾಂಗೀಣ ಅಭಿವೃದ್ಧಿಯನ್ನು ಮನಗಂಡು ರಚಿಸಿದ ಸಂವಿಧಾನಕ್ಕೆ ಬದ್ಧರಾಗಿ ಕಾನೂನು ಕ್ರಮಗಳನ್ನು ಪಾಲಿಸಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು ದೇಶಕ್ಕಾಗಿ ಸೇವೆ ಸಲ್ಲಿಸಬೇಕು ಎಂದರು.

ವಾಣಿ ಅಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸುಹಾಸಿನಿ, ಕಾಲೇಜಿನ ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಉಪಸ್ಥಿತರಿದ್ದರು. ಶಿಕ್ಷಕಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

 ಕಳಿಯ: ಅಕ್ರಮ ಮರಳು ಸಾಗಾಟ: ಎರಡು ಪಿಕಪ್ ವಾಹನ ಸಹಿತ ಮರಳು ವಶ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya
error: Content is protected !!