23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಯುವ ಮುಂದಾಳು ಹಾಗೂ ಸಾಮಾಜಿಕ ಕಾರ್‍ಯಕರ್ತ ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಆಗಮಿಸಿ ಗೌರವ ರಕ್ಷೆಯನ್ನು ಸ್ವೀಕರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕ ರೆ. ಫಾ. ಅಬೆಲ್ ಲೋಬೊ ಮಾತನಾಡಿ ಪ್ರಜಾಪ್ರಭುತ್ವ ನಮ್ಮ ದೇಶದ ಸಂವಿಧಾನದಲ್ಲಿ ಅಡಕವಾಗಿರುವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ನಮ್ಮನ್ನು ಜಾಗೃತಗೊಳಿಸುವುದೆಂದು ತಿಳಿಸುತ್ತಾ ಸೌಹಾರ್ಧಯುತವಾಗಿ ಏಕತೆಯಿಂದ ಬಾಳಿ ಬದುಕಬೇಕೆಂಬ ಸಂದೇಶ ನೀಡಿದರು

ವೇದಿಕೆಯಲ್ಲಿ ಪ್ರಾಂಶುಪಾಲ ಫಾ. ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್, ಕಾರ್ಯದರ್ಶಿ ಲಿಗೋರಿ ವಾಸ್, ಸ್ಥಳೀಯ ಪಂಚಾಯತ್ ಸದಸ್ಯರಾದ ಅನಿಲ್ ಡಿಸೋಜಾ ಹಾಗೂ ಜಾನೆಟ್ ರೊಡ್ರಿಗಸ್, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಪಥ ಸಂಚಲನ ಹಾಗೂ ಸಾಮೂಹಿಕ ಕವಾಯತು ನಡೆಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ನೃತ್ಯ ಹಾಗೂ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು. ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಜಾಪ್ರಭುತ್ವ ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು.

ಕಾರ್ಯಕ್ರಮವನ್ನು ಶಿಕ್ಷಕಿ ಸಿ. ಸಿರಿಶಾ ಹಾಗೂ ಮಿಶಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಕರಾಯ ಶ್ರೀಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವದ ಕಾರ್ಯಾಲಯ ಕಛೇರಿ ಉದ್ಘಾಟನೆ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya
error: Content is protected !!