July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್.ಎಸ್.ಎಫ್ ಇದರ ಬೆಳ್ತಂಗಡಿ ಡಿವಿಷನ್ ವಾರ್ಷಿಕ ಮಹಾಸಭೆಯು ಜ.23ರಂದು ವೇಣೂರಿನ ಪಡ್ಡಂದಡ್ಕದಲ್ಲಿ ನಡೆಯಿತು.

ಡಿವಿಷನ್ ಅಧ್ಯಕ್ಷ ಖಲಂದರ್ ಶಾಫಿ ಮದನಿ ಸಭಾಧ್ಯಕ್ಷತೆ ವಹಿಸಿದ್ದರು. ಮಹಾಸಭೆಯನ್ನು ಅಬ್ದುಲ್ ಜಲೀಲ್ ಮದನಿ ಉಸ್ತಾದರು ಉದ್ಘಾಟಿಸಿದರು.

ಸಯ್ಯದ್ ಶರಫುದ್ದೀನ್ ತಂಙಳ್ ಪಡ್ಡಂದಡ್ಕ ದುಆ ಆಶೀರ್ವಚನ ನೀಡಿದರು. ದ.ಕ ಈಸ್ಟ್ ಜಿಲ್ಲಾ ನಾಯಕ ಸ್ವಾದಿಕ್ ಮಾಸ್ಟರ್ ಸುಳ್ಯ ಭಾಗವಹಿಸಿದ್ದರು.

2025-26ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಇಸಾಕ್ ಅಳದಂಗಡಿ, ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಅಹ್ಸನಿ ಮಲೆಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಪಡ್ಡಂದಡ್ಕ, ಕೋಶಾಧಿಕಾರಿಯಾಗಿ ಹಂಝ ಕಕ್ಕಿಂಜೆ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುಬೀನ್ ಉಜಿರೆ, ಕ್ಯೂಡಿ ಕಾರ್ಯದರ್ಶಿಯಾಗಿ ಶಾಕಿರ್ ಉಜಿರೆ, ದಆವಾ ಕಾರ್ಯದರ್ಶಿಯಾಗಿ ಬಾತಿಶ್ ಮುಈನಿ ನಾವೂರು, ಜೀಡಿ ಕಾರ್ಯದರ್ಶಿಯಾಗಿ ಫಯಾಜ್ ಗೇರುಕಟ್ಟೆ, ಮೀಡಿಯಾ ಕಾರ್ಯದರ್ಶಿಯಾಗಿ ಹಾಫಿಲ್ ಬಾಸಿತ್ ಹಿಮಮಿ ಸಖಾಫಿ ನಾವೂರು, ರೈಂಬೋ ಕಾರ್ಯದರ್ಶಿಯಾಗಿ ನೌಫಲ್ ಮರ್ಝೂಖಿ ಸಖಾಫಿ ಶಿರ್ಲಾಲ್ ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಿವಿಷನ್ ವ್ಯಾಪ್ತಿಯ 7 ಸೆಕ್ಟರ್‌ಗಳ ಕೌನ್ಸಿಲರ್‌ಗಳು ಭಾಗವಹಿಸಿದ್ದರು.

ಡಿವಿಷನ್ ಪ್ರಧಾನ ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ ಸ್ವಾಗತಿಸಿ ವರದಿ ಮಂಡಿಸಿದರು. ಕೋಶಾಧಿಕಾರಿ ಇಸಾಕ್ ಅಳದಂಗಡಿ ಲೆಕ್ಕಪತ್ರ ವಾಚಿಸಿದರು. ನೂತನ ಕಾರ್ಯದರ್ಶಿ ನಾಸಿರ್ ವಂದಿಸಿದರು.

Related posts

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya
error: Content is protected !!