March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರತ್ನಾವತಿ ರವರ ಅಧ್ಯಕ್ಷತೆಯಲ್ಲಿ ಜ.27 ರಂದು ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆಯ ಮುಖ್ಯೋಪಾಧ್ಯಾಯ ಶಂಭು ಶಂಕರ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್‌ ಸದಸ್ಯರಾದ ಅಶೋಕ್ ಕುಮಾರ್, ಶ್ರೀಮತಿ ಬೇಬಿ, ಸೂರಜ್ ಗೌಡ ವಳಂಬ್ರ, ರಾಜೇಶ್ ಗೌಡ, ಗುರುಪ್ರಸಾದ್, ಶ್ರೀಮತಿ ಲಾವಣ್ಯ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ಸ್ವಾಗತಿಸಿ, ವಂದಿಸಿದರು. ಕಾರ್ಯದರ್ಶಿ ಜನಾರ್ದನ ಗೌಡ ಅನುಪಾಲನ ವರದಿ ವಾಚಿಸಿದರು. ವಿತೇಶ್ ಕೋಟ್ಯಾನ್ ಜಮಾ ಖರ್ಚುಗಳ ವಿವರವನ್ನು ಮಂಡಿಸಿದರು.

Related posts

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್ಐಟಿ ಕಸ್ಟಡಿಗೆ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!