23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.
ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಆಶ್ರಮ ನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.

ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಕು. ಯಶಸ್ವಿನಿ ಸ್ವಾಗತಿಸಿ, ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಬಳಂಜ.ಬದಿನಡೆ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವ: ಧಾರ್ಮಿಕ ಸಭೆ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!