25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.
ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಆಶ್ರಮ ನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.

ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಕು. ಯಶಸ್ವಿನಿ ಸ್ವಾಗತಿಸಿ, ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya
error: Content is protected !!