37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
error: Content is protected !!