July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲು

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಪಡ್ಡಂದಡ್ಕದಲ್ಲಿ ಶ್ರೀ ಮಂಜುನಾಥೇಶ್ವರ ಕುಣಿತ ಭಜನಾ ಮಂಡಳಿಗೆ ಚಾಲನೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya
error: Content is protected !!