September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕರಾಟೆ ಸ್ಪರ್ಧೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya
error: Content is protected !!