ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

ಉಜಿರೆ: ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಮತ್ತು ಭಾರತದ ರಕ್ಷಣಾ ಸಚಿವಾಲಯ (MoD) ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯ (MoE) ಶೌರ್ಯ ಪ್ರಶಸ್ತಿಗಳ ಉಪಕ್ರಮದ ಭಾಗವಾಗಿ “ವೀರ್ ಗಾಥಾ”ಸ್ಪರ್ಧೆಯನ್ನು 3ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಶೌರ್ಯ ಪ್ರಶಸ್ತಿಗಳನ್ನು ಪಡೆದವರ ಶೌರ್ಯ ಮತ್ತು ಶೌರ್ಯದ ಕಥೆಗಳನ್ನು ಹಂಚಿಕೊಳ್ಳುವ ಮೂಲಕ ಶಾಲಾ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಈ ಸ್ಪರ್ಧೆಯನ್ನು ಪರಿಚಯಿಸಲಾಗಿದ್ದು, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಧೈರ್ಯ ಮತ್ತು ಪರಿಶ್ರಮದ ಮೌಲ್ಯಗಳನ್ನು ತುಂಬುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು, ದೇಶದಲ್ಲಿಯೇ ಆಯ್ಕೆ ಆಗಿರುವ ನೂರು ವಿದ್ಯಾರ್ಥಿಗಳಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಭಟ್ ಚಿತ್ರಕಲಾ ಸ್ಪರ್ಧೆಯಲ್ಲಿ ಆಯ್ಕೆ ಆಗಿದ್ದು, ಜನವರಿ 26ರಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡು, ರಕ್ಷಣಾ ಸಚಿವರಿಂದ ಸನ್ಮಾನಕ್ಕೆ ಭಾಜನರಾಗಿ ಇಂದು ಶಾಲೆಗೆ
ಹೆಮ್ಮೆಯಿಂದ ಆಗಮಿಸಿದ ವಿದ್ಯಾರ್ಥಿಗೆ ಶಾಲೆಯಲ್ಲಿ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಾತ್ವಿಕ್ ಭಟ್ ರ ಪೋಷಕರು ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ಧನ್ಯಕುಮಾರ್ ಇವರು ಭಾಗಿಯಾಗಿದ್ದರು.

ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪೃಥ್ವಿ ನಿರೂಪಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿದರು.

Related posts

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಬೈಕ್ ಹಾಗೂ ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸಾವು

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!