September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ರಾಷ್ಟ್ರೀಯ ಹಬ್ಬಗಳನ್ನು ಅತ್ಯಂತ ಸಂಭ್ರಮದಿಂದ ನಾವು ಆಚರಿಸಬೇಕು. ಭಾರತದ ಇತಿಹಾಸ ,ಭಾರತದ ಪರಂಪರೆ, ಸ್ವರಾಜ್ಯದ ಮಹತ್ವ, ಒಗ್ಗಟ್ಟಿನ ಬಲ, ವಿದ್ಯಾರ್ಥಿಗಳ ಕರ್ತವ್ಯ ಹಾಗೂ ತನ್ನ ಗುಣದಲ್ಲಿ ಮಾಡಬೇಕಾದ ಉತ್ತಮ ಮಾರ್ಪಾಡುಗಳನ್ನು, ಸಂವಿಧಾನದ ರಚನೆ ಹಾಗೂ ಮಹತ್ವ ಜೊತೆಗೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕಾದ ಉತ್ತಮ ಹವ್ಯಾಸ ಇತ್ಯಾದಿಗಳನ್ನು ಹಲವು ಉದಾಹರಣೆ ಹಾಗೂ ಕಥೆಗಳ ಮೂಲಕ ವಿದ್ಯಾರ್ಥಿಗಳ ಮನ ಮುಟ್ಟುವಂತೆ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಸಿ, ಸ್ವಾಗತಿಸಿದರು.

ಬಳಿಕ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳ ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಕು. ಪೂರ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಕು. ಶ್ರೇಯಾ ಅತಿಥಿಗಳನ್ನು ಪರಿಚಯಿಸಿದರು. ಕು. ಧನ್ಯಶ್ರಿ ವಂದಿಸಿದರು.

Related posts

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!