22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ರಾಷ್ಟ್ರೀಯ ಹಬ್ಬಗಳನ್ನು ಅತ್ಯಂತ ಸಂಭ್ರಮದಿಂದ ನಾವು ಆಚರಿಸಬೇಕು. ಭಾರತದ ಇತಿಹಾಸ ,ಭಾರತದ ಪರಂಪರೆ, ಸ್ವರಾಜ್ಯದ ಮಹತ್ವ, ಒಗ್ಗಟ್ಟಿನ ಬಲ, ವಿದ್ಯಾರ್ಥಿಗಳ ಕರ್ತವ್ಯ ಹಾಗೂ ತನ್ನ ಗುಣದಲ್ಲಿ ಮಾಡಬೇಕಾದ ಉತ್ತಮ ಮಾರ್ಪಾಡುಗಳನ್ನು, ಸಂವಿಧಾನದ ರಚನೆ ಹಾಗೂ ಮಹತ್ವ ಜೊತೆಗೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕಾದ ಉತ್ತಮ ಹವ್ಯಾಸ ಇತ್ಯಾದಿಗಳನ್ನು ಹಲವು ಉದಾಹರಣೆ ಹಾಗೂ ಕಥೆಗಳ ಮೂಲಕ ವಿದ್ಯಾರ್ಥಿಗಳ ಮನ ಮುಟ್ಟುವಂತೆ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಸಿ, ಸ್ವಾಗತಿಸಿದರು.

ಬಳಿಕ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳ ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಕು. ಪೂರ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಕು. ಶ್ರೇಯಾ ಅತಿಥಿಗಳನ್ನು ಪರಿಚಯಿಸಿದರು. ಕು. ಧನ್ಯಶ್ರಿ ವಂದಿಸಿದರು.

Related posts

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಮಂಗಳೂರು ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಕೊಕ್ರಾಡಿ ಹರಿಶ್ವoದ್ರ ಆಚಾರ್ಯ ರವರಿಗೆ ಸನ್ಮಾನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!