Uncategorized

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

ಉಜಿರೆಯ ಮಂಜುಶ್ರೀ ಮುದ್ರಣಾಲಯದಲ್ಲಿ ಸುದೀರ್ಘ 42 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರೊಡಕ್ಷನ್ ವಿಭಾಗದ ಮೇಲ್ವಿಚಾರಕರಾಗಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ನಿವೃತ್ತರಾದ ವಿಶ್ವನಾಥ ಶೆಟ್ಟಿಯವರಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ. ಮಹಿಳಾ ಐ.ಟಿ.ಐ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿ ಉಜಿರೆ ಎಸ್.ಡಿಎಂ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಪ್ರೊ. ಎಸ್. ಸತೀಶ್ಚಂದ್ರರವರು ವಿಶ್ವನಾಥ ಶೆಟ್ಟಿ ಮತ್ತು ಶ್ರೀಮತಿ ವನಿತಾ ವಿಶ್ವನಾಥ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿ, ಅವರು ಸಂಸ್ಥೆಗೆ ಸುದೀರ್ಘ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ವಿಶ್ವನಾಥ ಶೆಟ್ಟರ ಸೇವೆಯನ್ನು ಪ್ರಶಂಸಿಸಿದರು.

ಸಹೋದ್ಯೋಗಿ ಮೋನಪ್ಪ ಟಿ. ಹಾಗೂ ಚಿತ್ತರಂಜನ್ ವಿಶ್ವನಾಥ ಶೆಟ್ಟರ ಕಾರ್ಯವೈಖರಿ ಕುರಿತು ಅನುಭವ ಹಂಚಿಕೊಂಡರು.

ಮಂಜುಶ್ರೀ ಮುದ್ರಣಾಲಯದ ವ್ಯವಸ್ಥಾಪಕರಾದ ಶೇಖರ್ ಟಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ವ್ಯವಸ್ಥಾಪಕರಾದ ವೆಂಕಪ್ಪ ವಂದಿಸಿದರು, ರವಿ ಪರಕ್ಕಜೆ ನಿರೂಪಿಸಿದರು.

ಮುದ್ರಣಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ,ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ ಎರ್ನೋಡಿ ವತಿಯಿಂದ ಸ್ವಾತಂತ್ರೋತ್ಸವ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಸುದ್ದಿ ಉದಯ ವಾರಪತ್ರಿಕೆ ವೀಕ್ಷಿಸಿ, ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಖ್ಯಾತ ಚಲನ ಚಿತ್ರ ನಟ,ಸ್ಪೂರ್ತಿಯ ಮಾತುಗಾರ ರಮೇಶ್ ಅರವಿಂದ್

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!