July 23, 2026
Uncategorized

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

ಉಜಿರೆಯ ಮಂಜುಶ್ರೀ ಮುದ್ರಣಾಲಯದಲ್ಲಿ ಸುದೀರ್ಘ 42 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರೊಡಕ್ಷನ್ ವಿಭಾಗದ ಮೇಲ್ವಿಚಾರಕರಾಗಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ನಿವೃತ್ತರಾದ ವಿಶ್ವನಾಥ ಶೆಟ್ಟಿಯವರಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ. ಮಹಿಳಾ ಐ.ಟಿ.ಐ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿ ಉಜಿರೆ ಎಸ್.ಡಿಎಂ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಪ್ರೊ. ಎಸ್. ಸತೀಶ್ಚಂದ್ರರವರು ವಿಶ್ವನಾಥ ಶೆಟ್ಟಿ ಮತ್ತು ಶ್ರೀಮತಿ ವನಿತಾ ವಿಶ್ವನಾಥ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿ, ಅವರು ಸಂಸ್ಥೆಗೆ ಸುದೀರ್ಘ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ವಿಶ್ವನಾಥ ಶೆಟ್ಟರ ಸೇವೆಯನ್ನು ಪ್ರಶಂಸಿಸಿದರು.

ಸಹೋದ್ಯೋಗಿ ಮೋನಪ್ಪ ಟಿ. ಹಾಗೂ ಚಿತ್ತರಂಜನ್ ವಿಶ್ವನಾಥ ಶೆಟ್ಟರ ಕಾರ್ಯವೈಖರಿ ಕುರಿತು ಅನುಭವ ಹಂಚಿಕೊಂಡರು.

ಮಂಜುಶ್ರೀ ಮುದ್ರಣಾಲಯದ ವ್ಯವಸ್ಥಾಪಕರಾದ ಶೇಖರ್ ಟಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ವ್ಯವಸ್ಥಾಪಕರಾದ ವೆಂಕಪ್ಪ ವಂದಿಸಿದರು, ರವಿ ಪರಕ್ಕಜೆ ನಿರೂಪಿಸಿದರು.

ಮುದ್ರಣಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya
error: Content is protected !!