July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಸಂಚಾಲಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಮಾತನಾಡಿ ಜಾತಿ, ಧರ್ಮ ಭೇದಭಾವವಿಲ್ಲದೇ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಬೇಕು. ನಮ್ಮ ಭಾರತ ಸಂವಿಧಾನದಲ್ಲಿ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ನಮಗೆ ತಿಳಿಸಲ್ಪಟ್ಟಿದೆ, ಯಾವ ರೀತಿಯಲ್ಲಿ ನಾವು ಹಕ್ಕುಗಳನ್ನು ಪಡೆಯಬಹುದು ಮತ್ತು ಸಂವಿಧಾನವನ್ನು ಪಾಲಿಸಬಹುದು ಎಂದು ತಿಳಿಸಿದರು. ಎಲ್ಲಾ ರಾಜ್ಯಗಳಲ್ಲಿ ಗಣರಾಜ್ಯೋತ್ಸವನ್ನು ಆಚರಿಸಿ ಸಂಭ್ರಮಿಸುತ್ತೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಭಾಷೆ, ಆಚರಣೆ, ಊಟದ ಪದ್ದತಿ ಬೇರೆ ಬೇರೆ ಇದ್ದರೂ ನಾವು ಒಂದೇ ಎಂಬುದನ್ನು ಕಾಣಬಹುದು. ಅದೇ ರೀತಿ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಒಳ್ಳೆ ರೀತಿಯಲ್ಲಿ ನಿಭಾಯಿಸಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳು, ನಾವೆಲ್ಲ ಒಟ್ಟಿಗೆ ಬೆರೆತು ಉತ್ತಮ ನಾಗರಿಕರಾಗೋಣ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಂವಿಧಾನದ ಪೀಠಿಕೆಯ ಕಂಠಪಾಠ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ದಿವ್ಯ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
error: Content is protected !!