22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಯುವ ಮುಂದಾಳು ಹಾಗೂ ಸಾಮಾಜಿಕ ಕಾರ್‍ಯಕರ್ತ ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಆಗಮಿಸಿ ಗೌರವ ರಕ್ಷೆಯನ್ನು ಸ್ವೀಕರಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕ ರೆ. ಫಾ. ಅಬೆಲ್ ಲೋಬೊ ಮಾತನಾಡಿ ಪ್ರಜಾಪ್ರಭುತ್ವ ನಮ್ಮ ದೇಶದ ಸಂವಿಧಾನದಲ್ಲಿ ಅಡಕವಾಗಿರುವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ನಮ್ಮನ್ನು ಜಾಗೃತಗೊಳಿಸುವುದೆಂದು ತಿಳಿಸುತ್ತಾ ಸೌಹಾರ್ಧಯುತವಾಗಿ ಏಕತೆಯಿಂದ ಬಾಳಿ ಬದುಕಬೇಕೆಂಬ ಸಂದೇಶ ನೀಡಿದರು

ವೇದಿಕೆಯಲ್ಲಿ ಪ್ರಾಂಶುಪಾಲ ಫಾ. ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್, ಕಾರ್ಯದರ್ಶಿ ಲಿಗೋರಿ ವಾಸ್, ಸ್ಥಳೀಯ ಪಂಚಾಯತ್ ಸದಸ್ಯರಾದ ಅನಿಲ್ ಡಿಸೋಜಾ ಹಾಗೂ ಜಾನೆಟ್ ರೊಡ್ರಿಗಸ್, ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಪಥ ಸಂಚಲನ ಹಾಗೂ ಸಾಮೂಹಿಕ ಕವಾಯತು ನಡೆಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ನೃತ್ಯ ಹಾಗೂ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು. ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಜಾಪ್ರಭುತ್ವ ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು.

ಕಾರ್ಯಕ್ರಮವನ್ನು ಶಿಕ್ಷಕಿ ಸಿ. ಸಿರಿಶಾ ಹಾಗೂ ಮಿಶಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

Suddi Udaya
error: Content is protected !!