30.4 C
ಪುತ್ತೂರು, ಬೆಳ್ತಂಗಡಿ
June 6, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್.ಎಸ್.ಎಫ್ ಇದರ ಬೆಳ್ತಂಗಡಿ ಡಿವಿಷನ್ ವಾರ್ಷಿಕ ಮಹಾಸಭೆಯು ಜ.23ರಂದು ವೇಣೂರಿನ ಪಡ್ಡಂದಡ್ಕದಲ್ಲಿ ನಡೆಯಿತು.

ಡಿವಿಷನ್ ಅಧ್ಯಕ್ಷ ಖಲಂದರ್ ಶಾಫಿ ಮದನಿ ಸಭಾಧ್ಯಕ್ಷತೆ ವಹಿಸಿದ್ದರು. ಮಹಾಸಭೆಯನ್ನು ಅಬ್ದುಲ್ ಜಲೀಲ್ ಮದನಿ ಉಸ್ತಾದರು ಉದ್ಘಾಟಿಸಿದರು.

ಸಯ್ಯದ್ ಶರಫುದ್ದೀನ್ ತಂಙಳ್ ಪಡ್ಡಂದಡ್ಕ ದುಆ ಆಶೀರ್ವಚನ ನೀಡಿದರು. ದ.ಕ ಈಸ್ಟ್ ಜಿಲ್ಲಾ ನಾಯಕ ಸ್ವಾದಿಕ್ ಮಾಸ್ಟರ್ ಸುಳ್ಯ ಭಾಗವಹಿಸಿದ್ದರು.

2025-26ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಇಸಾಕ್ ಅಳದಂಗಡಿ, ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಅಹ್ಸನಿ ಮಲೆಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಪಡ್ಡಂದಡ್ಕ, ಕೋಶಾಧಿಕಾರಿಯಾಗಿ ಹಂಝ ಕಕ್ಕಿಂಜೆ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಮುಬೀನ್ ಉಜಿರೆ, ಕ್ಯೂಡಿ ಕಾರ್ಯದರ್ಶಿಯಾಗಿ ಶಾಕಿರ್ ಉಜಿರೆ, ದಆವಾ ಕಾರ್ಯದರ್ಶಿಯಾಗಿ ಬಾತಿಶ್ ಮುಈನಿ ನಾವೂರು, ಜೀಡಿ ಕಾರ್ಯದರ್ಶಿಯಾಗಿ ಫಯಾಜ್ ಗೇರುಕಟ್ಟೆ, ಮೀಡಿಯಾ ಕಾರ್ಯದರ್ಶಿಯಾಗಿ ಹಾಫಿಲ್ ಬಾಸಿತ್ ಹಿಮಮಿ ಸಖಾಫಿ ನಾವೂರು, ರೈಂಬೋ ಕಾರ್ಯದರ್ಶಿಯಾಗಿ ನೌಫಲ್ ಮರ್ಝೂಖಿ ಸಖಾಫಿ ಶಿರ್ಲಾಲ್ ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಿವಿಷನ್ ವ್ಯಾಪ್ತಿಯ 7 ಸೆಕ್ಟರ್‌ಗಳ ಕೌನ್ಸಿಲರ್‌ಗಳು ಭಾಗವಹಿಸಿದ್ದರು.

ಡಿವಿಷನ್ ಪ್ರಧಾನ ಕಾರ್ಯದರ್ಶಿ ನವಾಝ್ ಮಾವಿನಕಟ್ಟೆ ಸ್ವಾಗತಿಸಿ ವರದಿ ಮಂಡಿಸಿದರು. ಕೋಶಾಧಿಕಾರಿ ಇಸಾಕ್ ಅಳದಂಗಡಿ ಲೆಕ್ಕಪತ್ರ ವಾಚಿಸಿದರು. ನೂತನ ಕಾರ್ಯದರ್ಶಿ ನಾಸಿರ್ ವಂದಿಸಿದರು.

Related posts

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya
error: Content is protected !!