22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರತ್ನಾವತಿ ರವರ ಅಧ್ಯಕ್ಷತೆಯಲ್ಲಿ ಜ.27 ರಂದು ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆಯ ಮುಖ್ಯೋಪಾಧ್ಯಾಯ ಶಂಭು ಶಂಕರ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್‌ ಸದಸ್ಯರಾದ ಅಶೋಕ್ ಕುಮಾರ್, ಶ್ರೀಮತಿ ಬೇಬಿ, ಸೂರಜ್ ಗೌಡ ವಳಂಬ್ರ, ರಾಜೇಶ್ ಗೌಡ, ಗುರುಪ್ರಸಾದ್, ಶ್ರೀಮತಿ ಲಾವಣ್ಯ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ಸ್ವಾಗತಿಸಿ, ವಂದಿಸಿದರು. ಕಾರ್ಯದರ್ಶಿ ಜನಾರ್ದನ ಗೌಡ ಅನುಪಾಲನ ವರದಿ ವಾಚಿಸಿದರು. ವಿತೇಶ್ ಕೋಟ್ಯಾನ್ ಜಮಾ ಖರ್ಚುಗಳ ವಿವರವನ್ನು ಮಂಡಿಸಿದರು.

Related posts

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya
error: Content is protected !!