22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.
ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಆಶ್ರಮ ನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.

ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಕು. ಯಶಸ್ವಿನಿ ಸ್ವಾಗತಿಸಿ, ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಮುಂಡಾಜೆ: ನದಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಸಾವು

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya
error: Content is protected !!