September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.
ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಆಶ್ರಮ ನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.

ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಕು. ಯಶಸ್ವಿನಿ ಸ್ವಾಗತಿಸಿ, ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಬೆಳ್ತಂಗಡಿ ಕುಂಬಾರರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ  ಮೂಳೆ ತಜ್ಞರು ಲಭ್ಯ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya
error: Content is protected !!