May 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!