22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya
error: Content is protected !!