24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಸೋಲೋ‌ ಡ್ಯಾನ್ಸ್ ಸ್ಪರ್ಧೆ, ಬೆಳ್ತಂಗಡಿಯ ರಿತ್ವಿಕ್ ಕೆಪಿ ಪ್ರಥಮ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!