24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

Suddi Udaya
error: Content is protected !!