31.4 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ರಾಷ್ಟ್ರೀಯ ಹಬ್ಬಗಳನ್ನು ಅತ್ಯಂತ ಸಂಭ್ರಮದಿಂದ ನಾವು ಆಚರಿಸಬೇಕು. ಭಾರತದ ಇತಿಹಾಸ ,ಭಾರತದ ಪರಂಪರೆ, ಸ್ವರಾಜ್ಯದ ಮಹತ್ವ, ಒಗ್ಗಟ್ಟಿನ ಬಲ, ವಿದ್ಯಾರ್ಥಿಗಳ ಕರ್ತವ್ಯ ಹಾಗೂ ತನ್ನ ಗುಣದಲ್ಲಿ ಮಾಡಬೇಕಾದ ಉತ್ತಮ ಮಾರ್ಪಾಡುಗಳನ್ನು, ಸಂವಿಧಾನದ ರಚನೆ ಹಾಗೂ ಮಹತ್ವ ಜೊತೆಗೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕಾದ ಉತ್ತಮ ಹವ್ಯಾಸ ಇತ್ಯಾದಿಗಳನ್ನು ಹಲವು ಉದಾಹರಣೆ ಹಾಗೂ ಕಥೆಗಳ ಮೂಲಕ ವಿದ್ಯಾರ್ಥಿಗಳ ಮನ ಮುಟ್ಟುವಂತೆ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಸಿ, ಸ್ವಾಗತಿಸಿದರು.

ಬಳಿಕ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳ ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಕು. ಪೂರ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಕು. ಶ್ರೇಯಾ ಅತಿಥಿಗಳನ್ನು ಪರಿಚಯಿಸಿದರು. ಕು. ಧನ್ಯಶ್ರಿ ವಂದಿಸಿದರು.

Related posts

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!